Monday, May 20, 2024

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : 8 ಜನರು ದಾರುಣ ಸಾವು, 18 ಮಂದಿ ಗಂಭೀರ

ಬೆಂಗಳೂರು : ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿರುವ ಘಟನೆ ತಮಿಳುನಾಡಿನ ಶಿವಕಾಶಿ ಬಳಿ ನಡೆದಿದೆ.

ಭಾರತದ ಪಟಾಕಿ ಕೇಂದ್ರ ಎಂದು ಕರೆಯಲ್ಪಡುವ ಶಿವಕಾಶಿ ಬಳಿಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಐವರು ಮಹಿಳೆಯರು ಮೃತಪಟ್ಟಿದ್ದಾರೆ. ಜೊತೆಗೆ, ಇನ್ನೂ 12 ಮಂದಿ ಗಂಭೀರ ಪ್ರಮಾಣದ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ದುರ್ಘಟನೆ ನಡೆದ ಕಾರ್ಖಾನೆ ಲೈಸನ್ಸ್​ ಪಡೆದ ಕಾರ್ಖಾನೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಫೋಟದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರೊಂದಿಗೆ ಸ್ಥಳೀಯ ತನಿಖಾ ಸಂಸ್ಥೆಗಳು ತನಿಖೆ ಪ್ರಾರಂಭಿಸಿವೆ. ದುರಂತ ಘಟನೆಗೆ ಕಾರಣವಾದ ಸಂಭಾವ್ಯ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿವೆ.

ಭಾರತದ ಪಟಾಕಿ ಉತ್ಪಾದನಾ ಕೇಂದ್ರವೆಂದು ಪ್ರಸಿದ್ಧವಾಗಿರುವ ಶಿವಕಾಶಿ ಭಾರತದಲ್ಲಿ ಅತಿ ಹೆಚ್ಚು ಪಟಾಕಿಗಳು ತಯಾರಿಸುವ ಕೇಂದ್ರವಾಗಿದೆ. ಇಲ್ಲಿ ಅದೇ ರೀತಿ ಸ್ಟೇಷನರಿ ವಸ್ತುಗಳ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಘಟನೆಯಿಂದಾಗಿಸ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES