Sunday, September 8, 2024

ಭಾಗ್ಯ ಬಾರ್​ಗೆ ನುಗ್ಗಿದ ಕಳ್ಳರು, ಹಣ ದೋಚಿ ಪರಾರಿ

ಬೆಂಗಳೂರು: ಬಾರ್​ಗೆ ನುಗ್ಗಿದ ಇಬ್ಬರು ಕಳ್ಳರು ಬಾರ್​ನಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಘಟನೆ ನಗರದ ಟಿಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ರಾತ್ರಿ 2.30ರ ಸುಮಾರಿಗೆ ಟಿಸಿಪಾಳ್ಯದ ಬಳಿ ಇರುವ ಭಾಗ್ಯ ಬಾರ್​ಗೆ ಎಂಟ್ರಿಕೊಟ್ಟು ಇಬ್ಬರು ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಕಳ್ಳತನಕ್ಕೂ ಮುನ್ನ ತಮ್ಮ ಗುರುತು ಪತ್ತೆಯಾಗಬಾರದು ಎಂದು ತಲೆಗೆ ಹೆಲ್ಮೆಟ್​ ಧರಿಸಿ ಬಂದು ಬಾರ್​ ಶೆಟರ್​ ಮುರಿದು ಬಾರ್​ ಕ್ಯಾಶ್​ ಕೌಂಟರ್​ನಲ್ಲಿದ್ದ 60 ಸಾವಿರ ಹಣವನ್ನು ಕದ್ದಿದ್ದಾರೆ ಇದೇ ವೇಳೆ ಬಾರ್​ನಲ್ಲಿದ್ದ ಸಿಸಿಟಿವಿಯ ಡಿವಿಆರ್​ ಸಮೇತ ಕಳ್ಳರು ಪರಾರಿಯಾಗಿದ್ದಾರೆ. ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಟಿಸಿಪಾಳ್ಯದಲ್ಲಿರುವ ಭಾಗ್ಯಬಾರ್​ ನಲ್ಲಿ ಎರಡನೇ ಬಾರಿಗೆ ಕಳ್ಳತನ ಕೃತ್ಯ ನಡೆದಿದ್ದು ಘಟನೆ ಸಂಬಂಧ ಕೆ ಆರ್ ಪುರಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES