Saturday, October 5, 2024

SSLC ಟಾಪರ್ ಅಂಕಿತಾಗೆ 5 ಲಕ್ಷ ಬಹುಮಾನ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ (ಫಸ್ಟ್ ರ‍್ಯಾಂಕ್) ಪಡೆದ ವಿದ್ಯಾರ್ಥಿನಿ ಅಂಕಿತಾರನ್ನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸನ್ಮಾನಿಸಿದ್ದಾರೆ.

ಇಂದು ಅಂಕಿತಾ ಬಸಪ್ಪ ಕೊಣ್ಣೂರು ಹಾಗೂ ಮೂರನೇ ರ‍್ಯಾಂಕ್ ಪಡೆದ ಮಂಡ್ಯದ ವಿದ್ಯಾರ್ಥಿ ನವನೀತ್‌ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾದರು. ರಾಜ್ಯ ರ್ಕಾರದ ಪರವಾಗಿ ಇಬ್ಬರನ್ನೂ ಸನ್ಮಾನಿಸಿ, ವೈಯಕ್ತಿಕವಾಗಿ ಅಂಕಿತಾಗೆ 5 ಲಕ್ಷ ಮತ್ತು ನವನೀತ್​ಗೆ 2 ಲಕ್ಷ ರೂ. ಬಹುಮಾನ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ, ಗೌರವಿಸಿದೆ ಎಂದು ಹೇಳಿದ್ದಾರೆ.

ಇಬ್ಬರು ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್‌ ವಿತರಿಸಿದೆ. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಅಂತ ಶುಭ ಹಾರೈಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES