Tuesday, September 17, 2024

ಮೀನು ಹಿಡಿಯಲು ಹೋದ ನಾಲ್ಕು ಮಕ್ಕಳು ನೀರು ಪಾಲು

ಹಾಸನ: ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ದಾರುಣ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆಯಲ್ಲಿ ನಡೆದಿದೆ.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಈಜಲು ಹೋಗಿ ಸಾವಿಗೀಡಾದ ಮಕ್ಕಳು, ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ ಮಕ್ಕಳು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾರೆ ಈ ವೇಳೆ ಈಜು ಬಾರದಿದ್ದರು ನೀರಿಗೆ ಇಳಿದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಶೌಚಾಲಯದಲ್ಲಿ ಯುವತಿ ಅನುಮಾನಾಸ್ಪದ ಸಾವು, ಕತ್ತು ಕೊಯ್ದು ಸ್ಥಿತಿಯಲ್ಲಿ ದೇಹ ಪತ್ತೆ

ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆಯೂ ಆಲೂರು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

Related Articles

TRENDING ARTICLES