Tuesday, September 17, 2024

SSLC ಗ್ರೇಸ್ ಮಾರ್ಕ್ಸ್ ಬಗ್ಗೆ ಸಿಎಂ ಗರಂ: ಗ್ರೇಸ್​ ಮಾರ್ಕ್ಸ್​ ರದ್ದಿಗೆ ಸೂಚನೆ

ಬೆಂಗಳೂರು: ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡ ಅವರು, ಈ ವರ್ಷ ಗ್ರೇಸ್​ ಮಾರ್ಕ್ ಕೊಟ್ಟ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ. ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್ ಮಾರ್ಕ್ಸ್ ನೀಡಲಾಗಿದೆ. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಬಸ್​​ ಕಿಟಕಿಯಲ್ಲಿ ತಲೆ ಸಿಲುಕಿ ಪರದಾಡಿದ ಮಹಿಳೆ!

ವಿದ್ಯಾರ್ಥಿಗಳು ಅವರ ಅರ್ಹತೆ ಆಧಾರದಲ್ಲಿ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗಲ್ವಾ? ಕಡಿಮೆ ಅಂಕ ಪಡೆದರೆ ವಿದ್ಯಾರ್ಥಿಗಳು ಅನರ್ಹರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಶಿವಕುಮಾರ್​ ಮಾತಿಗೆ ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದರು.

RELATED ARTICLES

Related Articles

TRENDING ARTICLES