Tuesday, September 17, 2024

ಟಾಸ್ ಗೆದ್ದ MI ಬೌಲಿಂಗ್ ಆಯ್ಕೆ : ಕೊನೆಯ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್​ಗೆ ಸ್ಥಾನ, ಬುಮ್ರಾ ಔಟ್

ಬೆಂಗಳೂರು : ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್‌ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಕೊನೆಯ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್​ಗೆ ಸ್ಥಾನ ನೀಡಲಾಗಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂ ಐಪಿಎಲ್​ನ 67ನೇ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳು ಟೂರ್ನಿಯಿಂದ ಈಗಾಗಲೇ ಹೊರಬಿದ್ದಿದ್ದು, ಇಂದು ಪ್ರತಿಷ್ಠೆಗಾಗಿ ಆಡುತ್ತಿವೆ. ಗೆಲುವಿನ ಮೂಲಕ ಟೂರ್ನಿಗೆ ವಿದಾಯ ಹೇಳಲು ಮುಂಬೈ ಸಜ್ಜಾಗಿದೆ.

ಮುಂಬೈ ಇಂಡಿಯನ್ಸ್‌ ಆಡಿರುವ 13 ಪಂದ್ಯಗಳಲ್ಲಿ ಕೇವಲ 4 ಗೆಲುವು ಕಂಡಿದೆ. 9 ಪಂದ್ಯಗಳಲ್ಲಿ ಮುಖಭಂಗ ಅನುಭವಿಸಿದೆ. ಲಕ್ನೋ ಸೂಪರ್‌ ಜೈಂಟ್ಸ್‌ 13 ಪಂದ್ಯಗಳನ್ನು ಆಡಿದ್ದು 6 ಗೆಲುವು ಹಾಗೂ 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಮುಂಬೈ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ಲಕ್ನೋ 7ನೇ ಸ್ಥಾನದಲ್ಲಿದೆ.

ಇಂದು ಲಕ್ನೋ ಗೆದ್ದರೆ 14 ಅಂಕ ಪಡೆಯಲಿದೆ. ಆದರೆ, ಪ್ಲೇಆಫ್​ಗೆ ತಲುಪಲು ಸಾಧ್ಯವಿಲ್ಲ. ಆರ್​ಸಿಬಿ ಹಾಗೂ ಚೆನ್ನೈ ಉತ್ತಮ ರನ್​ ರೇಟ್​ ಹೊಂದಿದ್ದು, ಲಕ್ನೋ ಪ್ಲೇಆಫ್​ ಕನಸಿಗೆ ತಣ್ಣೀರು ಎರಚಿದೆ. ಡೆಲ್ಲಿ ಕ್ಯಾಪಿಟಲ್ಸ್​ ಕೂಡ 14 ಅಂಕ ಪಡೆದಿದೆ.

ಲಕ್ನೋ ಸೂಪರ್‌ ಜೈಂಟ್ಸ್‌

ಕೆ.ಎಲ್. ರಾಹುಲ್ (ನಾಯಕ), ದೇವದತ್ ಪಡಿಕ್ಕಲ್ (ವಿ.ಕೀ.), ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್

ಮುಂಬೈ ಇಂಡಿಯನ್ಸ್‌

ಇಶಾನ್ ಕಿಶನ್ (ವಿ.ಕೀ.), ನಮನ್ ಧೀರ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಹಾರ್ದಿಕ್ ಪಾಂಡ್ಯ (ನಾಯಕ), ನೆಹಾಲ್ ವಧೇರಾ, ರೊಮಾರಿಯೋ ಶೆಫರ್ಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಅರ್ಜುನ್ ತೆಂಡೂಲ್ಕರ್, ನುವಾನ್ ತುಷಾರ

RELATED ARTICLES

Related Articles

TRENDING ARTICLES