ಬೆಳಗಾವಿ: ಟಿಕೆಟ್ ಕೇಳಿದಕ್ಕೆ ಟಿಸಿ ಸೇರಿ ರೈಲ್ವೆ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದೆ.
ಘಟನೆಯಲ್ಲಿ ಯುಪಿ ಮೂಲದ ಕೋಚ್ ಅಟೆಂಡರ್ ದೇವಋಷಿ ವರ್ಮಾ ಸಾವನ್ನಪ್ಪಿದ್ದಾರೆ. ಗಾಯಗೊಂಡ ಟಿಸಿ ಸೇರಿ ಇನ್ನುಳಿದ ಸಿಬ್ಬಂದಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ರೈಲ್ವೆ ಸಿಬ್ಬಂದಿ ಮೇಲೆ ಹಲ್ಲೆಗೈದು ಖಾನಾಪುರದಲ್ಲಿ ಮುಸುಕುದಾರಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಕೊಲೆ ಆರೋಪಿಗಳ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಗುಂಡು
ಘಟನಾ ಸ್ಥಳಕ್ಕೆ ಉತ್ತರ ವಲಯ ಐಜಿಪಿ ವಿಕಾಸ ಕುಮಾರ್, ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಆರ್ಪಿಎಫ್ ಸಿಬ್ಬಂದಿ ಜೊತೆಗೆ ಚರ್ಚೆ ನಡೆಸಿದ್ದಾರೆ. ಪರಾರಿ ಆಗಿರುವ ಆರೋಪಿಗೆ ಶೋಧ ಕಾರ್ಯ ನಡೆಸಲು ಆರ್ಪಿಎಫ್ ಸಿಬ್ಬಂದಿಗೆ ಬೆಳಗಾವಿ ಪೊಲೀಸರು ಸಾಥ್ ನೀಡಿದ್ದಾರೆ. ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.