Thursday, September 19, 2024

ಹುಲಿಗೆಮ್ಮ ದೇವಿ ದರ್ಶನ ಪಡೆದು ಮನೆಗೆ ಹೊರಟವರು ಮಸಣಕ್ಕೆ! ಸ್ಥಳದಲ್ಲೇ ಮೂವರು ಸಾವು

ಕೊಪ್ಪಳ : ಎರಡು ಪ್ರತ್ಯೇಕ ಘಟನೆಯಲ್ಲಿ ಐವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರೆ, ಶೌಚಾಲಯ ಕುಸಿದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ಟ್ರ್ಯಾಕ್ಟರ್​ಗೆ ಖಾಸಗಿ ಬಸ್​ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹುಲಿಗೆಮ್ಮ ದೇವಿ ದರ್ಶನಕ್ಕೆ ಹೋಗಿದ್ದವರು ದುರ್ಮರಣ ಹೊಂದಿದ್ದಾರೆ. ದೇವಿ ದರ್ಶನ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಮುನಿರಾಬಾದ್​​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶೌಚಾಲಯ ಗೋಡೆ ಕುಸಿತ, ಇಬ್ಬರು ಸಾವು

ಶೌಚಾಲಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವನಪ್ಪಿದ ಘಟನೆ ಕೊಪ್ಫಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ನಡೆದಿದೆ. ಆಶಾ ಬೇಗಂ (35), ಭಾನು ಬಾಯಿ (36) ಮೃತ ದುರ್ದೈವಿ. ಸಾಮೂಹಿಕ ಬಹಿರ್ದೆಸೆಗೆ ತೆರಳಿದ್ದಾಗ ಘಟನೆ ನಡೆದಿದೆ.

ಇನ್ನೂ ಕಟ್ಟಡದ ಕೆಳಗೆ ನಾಲ್ವರು ಸಿಲುಕಿರೋ ಶಂಕೆ ವ್ಯಕ್ತವಾಗ್ತಿದೆ. ಇನ್ನು ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವರಗೇರಾ ಪಟ್ಟಣದ 5ನೇ ವಾರ್ಡಿನ ಸಾಮೂಹಿಕ ಶೌಚಾಲಯದಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES