Sunday, July 7, 2024

ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ಮ RCB : ಶಿವಣ್ಣ

ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ನಡೆಯುತ್ತಿರುವ ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ.

ಆರ್​ಸಿಬಿ ಜೆರ್ಸಿ ಧರಿಸಿ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನಟ ಶಿವಣ್ಣ ಆಗಮಿಸಿದ್ದಾರೆ. ಆರ್​ಸಿಬಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ಒತ್ತಡದಿಂದ ರಿಲ್ಯಾಕ್ಸ್ ಮೂಡ್​ಗೆ ಜಾರಿದ ನಟ ಶಿವಣ್ಣ ಪಂದ್ಯ ವೀಕ್ಷಿಸುತ್ತಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ. ತಮ್ಮ ಜೋಗಯ್ಯ ಸಿನಿಮಾದ ಡೈಲಾಗ್​ ರೀತಿಯಲ್ಲೇ ಆರ್​ಸಿಬಿಗೆ ವಿಶ್​ ಮಾಡಿದ್ದಾರೆ. ‘ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್​ಸಿಬಿ ಹುಡುಗರೇ..’ ಎಂದು ಪೋಸ್ಟ್ ಮಾಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್​ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಇನ್ನಿಂಗ್ಸ್​ ಆರಂಭಿಸಿದ್ದು, ತಂಡಕ್ಕೆ ಉತ್ತಮ ಆರಂಭ ನೀಡಿದ್ದಾರೆ.

ಮಳೆಯಿಂದ ಪಂದ್ಯ ತಾತ್ಕಾಲಿಕ ಸ್ಥಗಿತ

ಆರ್​ಸಿಬಿ 3 ಓವರ್​ಗಳಿಗೆ ವಿಕೆಟ್ ನಷ್ಟವಿಲ್ಲದೇ 31 ರನ್​ ಗಳಿಸಿದೆ. ಈ ವೇಳೆ 4ನೇ ಓವರ್​ ಆರಂಭಕ್ಕೂ ಮೊದಲೇ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ, ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ನಿಂತ ಬಳಿಕ ಮತ್ತೆ ಪಂದ್ಯ ಆರಂಭವಾಗಲಿದೆ. ವಿರಾಟ್ ಕೊಹ್ಲಿ 19 ಹಾಗೂ ಡು ಪ್ಲೆಸಿಸ್ 12 ರನ್​ ಗಳಿಸಿ ಕ್ರೀಸ್​ನಲ್ಲಿದ್ದಾರೆ.

RELATED ARTICLES

Related Articles

TRENDING ARTICLES