Sunday, September 8, 2024

ಜಮೀನು ಮಾರಿದ ದುಡ್ಡಿಗಾಗಿ ಮಗನನ್ನೇ ಕೊಂದ ಪಾಪಿ ತಂದೆ

ರಾಮನಗರ: ತಂದೆಯೇ ಮಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಹತ್ಯೆಮಾಡಿರುವ ಘಟನೆ ರಾಮನಗರ ತಾಲೂಕಿನ ಲಕ್ಕೋಜನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಭಾಸ್ಕರ್ (31) ಕೊಲೆಯಾದ ವ್ಯಕ್ತಿ ಎಂದು ಗರುತಿಸಲಾಗಿದೆ. ಕೃಷ್ಣಪ್ಪ (60) ಹತ್ಯೆಗೈದ ಆರೋಪಿ ತಂದೆಯಾಗಿದ್ದಾನೆ. ಇತ್ತೀಚೆಗೆ ಮಾರಾಟ ಮಾಡಿದ್ದ ಜಮೀನಿನ ದುಡ್ಡಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದ್ದು ಹಣಕ್ಕಾಗಿ ಕೊಲೆಮಾಡಲಾಗಿದೆ ಎಂದು ತಿಳಿದುಬಂದಿದೆ.
ಆರೋಪಿ ಹಾಗೂ ಆತನ ಮಗ ಜಮೀನು ಮಾರಿದ ಹಣದ ವಿಚಾರಕ್ಕೆ ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದೇ ರೀತಿ ಶುಕ್ರವಾರ ರಾತ್ರಿ ಕೂಡ ಗಲಾಟೆ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಮಗ ಮಲಗಿದ್ದಾಗ ಆರೋಪಿ ತಂದೆ ಮಚ್ಚಿನಿಂದ ತನ್ನ ಮಗನ ತಲೆಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಘಟನೆ ಸ್ಥಳಕ್ಕೆ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದು ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES