ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವೀಡಿಯೋಗಳ ಪೆನ್ಡ್ರೈವ್ಗಳನ್ನ ದೇವರಾಜೇಗೌಡ, ಕಾರ್ತಿಕ್ ಅವರೇ ಮಾರಾಟಕ್ಕಿಟ್ಟಿದ್ದರು. ನಾನು ಅವನನ್ನ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿಸಿ ತಪ್ಪು ಮಾಡಿದೆ ಎಂಬ ನೋವು ಕಾಡುತ್ತಿದೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.
ನಗರದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಪೆನ್ ಡ್ರೈವ್ ಕೇಸಲ್ಲಿ ಡಿಸಿಎಂ ಡಿಕೆಶಿ 100 ಕೋಟಿ ಆಫರ್ ನೀಡಿದ್ದರು. ಆಫರ್ ತಂದವರು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಎಂಬ ವಕೀಲ ದೇವರಾಜೇಗೌಡ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್!
ಡಿ.ಕೆ ಶಿವಕುಮಾರ್ ಅವರ ಜೊತೆ ಮಾತನಾಡಿಸಿ ಎಲ್ಲೋ ತಪ್ಪು ಮಾಡಿದೆನೇನೋ ಅನ್ನೋ ನೋವು ನನಗೆ ಕಾಡುತ್ತಿದೆ. ನನಗೂ ಪೆನ್ಡ್ರೈವ್ಗೂ ಸಂಬಂಧ ಇಲ್ಲ. ಗೆಸ್ಟ್ ಅಪಿಯರೆನ್ಸ್ ತರ 2 ದಿನ ನಾನು ಸಿಲುಕಿದ್ದೆ, ಆದರೆ ಮೊನ್ನೆ ದಿನ ಏನೋ ಬುಲ್ಲೆಟ್ ಹೊಡೆದಿದ್ದಾನೆ. ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.