Sunday, September 8, 2024

ಶಾಲೆಯಲ್ಲಿ ಟಿಸಿ ನೀಡದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ : ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ (ಟಿಸಿ) ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಶಿರೂರು ಗ್ರಾಮದ ಮೇಲ್ಪಂಕ್ತಿಯಲ್ಲಿ ನಡೆದಿದೆ.

ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕಾಲೇಜಿನಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡದೆ ಬೈದರೆಂದು ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ನಿತಿನ್ ಬೈಂದೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, ಇತ್ತೀಚೆಗೆ ಪ್ರಕಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದನು. ಪಿಯುಸಿ ಸೇರ್ಪಡೆಯಾಗಲು ಇಂದು (ಮೇ 20) ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಶಾಲೆಗೆ ಹೋಗಿದ್ದಾನೆ.

ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ನಿತಿನ್​ಗೆ ಬೈದಿದ್ದಾರೆ ಎನ್ನಲಾಗಿದೆ. ತನಗೆ ಟಿಸಿ ಕೊಡದೇ ಬೈದರು ಎನ್ನುವ ಕಾರಣಕ್ಕೆ ಮನನೊಂದು ಡೆತ್ ನೋಟ್ ಬರೆದು, ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಸಂಬಂಧ ಪೋಷಕರು ಕೊಟ್ಟ ದೂರಿನ ಮೇರೆಗೆ, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ಮಗನನ್ನು ಕಳೆದುಕೊಂಡಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

RELATED ARTICLES

Related Articles

TRENDING ARTICLES