ಚಾಮರಾಜನಗರ: ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಮೃತ ಆನೆಯು ಹೆಣ್ಣಾನೆಯಾಗಿದ್ದು 25-30 ವರ್ಷ ವಯಸ್ಸಿನದು ಎಂದು ಅಂದಾಜು ಮಾಡಲಾಗಿದೆ.
ಭಾನುವಾರ ಮಧ್ಯಾಹ್ನ 1ಕ್ಕೆ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ಕಾಡಾನೆಯೊಂದು , ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ಬಿದ್ದಿರುವುದನ್ನು ಗಮನಿಸಿದ ಕೂಡಲೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನು ಓದಿ: ಪ್ರಜ್ವಲ್ ಪಾಸ್ಪೋರ್ಟ್ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯಕ್ಕೆ SIT ಪತ್ರ
ಸ್ಥಳಕ್ಕಾಗಮಿಸಿದ ಬಂಡೀಪುರ ಸಿಎಫ್ಒ ಎಸ್.ಪ್ರಭಾಕರನ್, ಹೆಡಿಯಾಲ ಎಸಿಎಫ್ ಜಿ.ರವೀಂದ್ರ, ಪಶುವೈಧ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಸ್ಧಳಕ್ಕೆ ಭೇಟಿ ನೀಡಿ, ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದಾರೆ. ಆದರೇ ಚಿಕಿತ್ಸೆ ಫಲಸದೇ ಕಾಡಾನೆ ಮೃತಪಟ್ಟಿದೆ.