Saturday, July 27, 2024

ಕೆರೆಯ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ಆನೆ ಸಾವು

ಚಾಮರಾಜನಗರ: ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಮೃತ ಆನೆಯು ಹೆಣ್ಣಾನೆಯಾಗಿದ್ದು 25-30 ವರ್ಷ ವಯಸ್ಸಿನದು ಎಂದು ಅಂದಾಜು ಮಾಡಲಾಗಿದೆ.

ಭಾನುವಾರ ಮಧ್ಯಾಹ್ನ 1ಕ್ಕೆ ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿಗಳು ಗಸ್ತು ಮಾಡುವಾಗ ಕಾಡಾನೆಯೊಂದು , ಹೆಡಿಯಾಲ ಉಪ-ವಿಭಾಗದ ವ್ಯಾಪ್ತಿಯ ಮೊಳೆಯೂರು ವಲಯದ ಹಿಡುಗಲಪಂಚೀ ಕೆರೆ ಬಳಿ ಬಿದ್ದಿರುವುದನ್ನು ಗಮನಿಸಿದ ಕೂಡಲೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ಪಾಸ್​ಪೋರ್ಟ್​ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯಕ್ಕೆ SIT ಪತ್ರ

ಸ್ಥಳಕ್ಕಾಗಮಿಸಿದ ಬಂಡೀಪುರ ಸಿಎಫ್ಒ ಎಸ್.ಪ್ರಭಾಕರನ್, ಹೆಡಿಯಾಲ‌ ಎಸಿಎಫ್ ಜಿ.ರವೀಂದ್ರ, ಪಶುವೈಧ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಸ್ಧಳಕ್ಕೆ ಭೇಟಿ ನೀಡಿ, ಆನೆಗೆ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದಾರೆ. ಆದರೇ ಚಿಕಿತ್ಸೆ ಫಲಸದೇ ಕಾಡಾನೆ ಮೃತಪಟ್ಟಿದೆ.

RELATED ARTICLES

Related Articles

TRENDING ARTICLES