Sunday, September 8, 2024

ಡಿಬಾಸ್​​ ದರ್ಶನ್​ ದಂಪತಿ ವಿವಾಹ ವಾರ್ಷಿಕೋತ್ಸವ: ಪವಿತ್ರಾ ಗೌಡರಿಂದ ಕರ್ಮದ ಪಾಠ

ಬೆಂಗಳೂರು: ನಟ ಡಿಬಾಸ್​ ದರ್ಶನ್​ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಪತ್ನಿ ವಿಜಯಲಕ್ಷಿ ಜೊತೆಗೆ ದುಬೈನಲ್ಲಿ ಆಚರಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದು ವೈರಲ್​ ಆಗುತ್ತಿದೆ. ಈ ನಡುವೆ ಪವಿತ್ರಾ ಗೌಡ ಹಂಚಿಕೊಂಡಿರುವ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್​ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ.

ನಟ ದರ್ಶನ್​ ಅಭಿನಯದ ಹೊಚ್ಚ ಹೊಸ ಸಿನಿಮಾ ‘ಡೆವಿಲ್​’ ಚಿತ್ರೀಕರಣದ ನಡುವೆಯೂ ದರ್ಶನ್​ ದುಬೈನಲ್ಲಿ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ನಿರ್ಮಾಪಕಿ ಶೈಲಜಾ ನಾಗ್ ಅವರು ದರ್ಶನ್​ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ಕೋರಿ ಫೋಟೊ ಹಾಕಿದ್ದರು. ಅದರ ಸ್ಕ್ರೀನ್‌ಶಾಟ್ ಅನ್ನು ವಿಜಯಲಕ್ಷ್ಮೀ ದರ್ಶನ್ ತಮ್ಮ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮೀ ಆ ಫೋಟೋ ಹಂಚಿಕೊಂಡ ಎರಡು ಗಂಟೆಯ ಬಳಿಕ ಪವಿತ್ರಾ ಗೌಡ ಕರ್ಮದ ಬಗ್ಗೆ ದರ್ಶನ್ ಮಾತನಾಡಿರುವ ಸ್ಟೇಟಸ್ ಹಾಕಿದ್ದಾರೆ. ಈ ವಿಚಾರಕ್ಕೆ ಅವರ ಅಭಿಮಾನಿಗಳು ಕೆಂಡಾಮಂಡಲರಾಗಿದ್ದಾರೆ.

ಇದನನ್ನು ಓದಿ: ಡಿ ಬಾಸ್ ‘ಡೆವಿಲ್’ ಚಿತ್ರದ ನಾಯಕಿ ತುಳುನಾಡ ಬೆಡಗಿ ‘ರಚನಾ ರೈ’ : ನೆಲದ ಪ್ರತಿಭೆಗೆ ಮನ್ನಣೆ

ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಾ ಗೌಡ ಅವರು ಕೋಪ ಹೊರಹಾಕಿದ್ದಾರ ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಅವರು ಈ ಹಿಂದೆ ಸಂದರ್ಶನವೊಂದರಲ್ಲಿ ಕರ್ಮದ ಬಗ್ಗೆ ಮಾತಾಡಿರುವ ವೈರಲ್ ವಿಡಿಯೊವನ್ನು ಈಗ ಪವಿತ್ರಾ ಗೌಡ ಶೇರ್ ಮಾಡಿ ‘ಕರ್ಮ’ ಎಂದು ಕ್ಯಾಪ್ಷನ್‌ ನೀಡಿದ್ದಾರೆ.

ಪವಿತ್ರಾ ಹಂಚಿಕೊಂಡಿರುವ ದರ್ಶನ್​ ಸಂದರ್ಶನದ ಈ ವೀಡಿಯೋದಲ್ಲಿ, ಕರ್ಮ ಎನ್ನುವುದು ಬ್ಯಾಗೇಜ್ ಥರ. ಏನನ್ನ ನೀವೂ ಅದರಲ್ಲಿ ಫಿಲ್ ಮಾಡ್ತೀರ ಅದೇ ನಿಮಗೆ ಸಿಗುತ್ತೆ. ನಾವೆಲ್ಲಾ ಚಿಕ್ಕವರಿರುವಾಗ ನಮ್ಮ ಅಜ್ಜಿ, ತಾತ ಹೇಳ್ತಾ ಇದ್ದರು. ಈಗ ಕರ್ಮ ಮಾಡ್ತಾ ಇದ್ದೀಯಾ ಮುಂದಿನ ಜನ್ಮಕ್ಕೆ ಕ್ಯಾರಿ ಆಗುತ್ತೆ ಅಂತ. ಆಗೆಲ್ಲಾ ಮುಂದಿನ ಜನ್ಮಕ್ಕೆ ಕ್ಯಾರಿ ಆಗ್ತಾ ಇತ್ತು. ಈಗ ಅಲ್ಲೆ ಡ್ರಾ ಅಲ್ಲೇ ಬಹುಮಾನ’ ಹೇಳಿದ್ದರು ಈ ವೀಡಿಯೊವನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದಾರೆ. ಈ ವಿಚಾರಕ್ಕೆ ಅವರ ಅಭಿಮಾನಿಗಳು ಕೋಪವಾಗಿದ್ದಾರೆ. ಆದರೆ ಇಲ್ಲಿ ಪವಿತ್ರಾ ಗೌಡ ಯಾರಿಗೆ ಕರ್ಮದ ಪಾಠ ಮಾಡಿದ್ರು ಗೊತ್ತಿಲ್ಲ. ಪಕ್ಕಾ ಇದು ವಿಜಯಲಕ್ಷ್ಮೀ ಅವರಿಗೆ ಎಂದು ಕಮೆಂಟ್‌ ಮಾಡಿದ್ದಾರೆ.

RELATED ARTICLES

Related Articles

TRENDING ARTICLES