Sunday, September 8, 2024

ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ: ಶಾಸಕ ಹರೀಶ್​ ಪೊಂಜಾ

ದಕ್ಷಿಣ ಕನ್ನಡ: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲು ನಾನು ರೆಡಿ ಎಂದು ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಎಸ್‍ಪಿಗೆ ಬುದ್ಧಿ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನೆಯಲ್ಲಿ ಪೊಲೀಸರಿಗೆ ಹರೀಶ್ ಪೂಂಜಾ ಅವಾಜ್ ಹಾಕಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಪಾಸ್​ಪೋರ್ಟ್​ ರದ್ದುಗೊಳಿಸಲು ವಿದೇಶಾಂಗ ಸಚಿವಾಲಯಕ್ಕೆ SIT ಪತ್ರ

ನನ್ನ ಕಾರ್ಯಕರ್ತರನ್ನ, ಬಿಜೆಪಿ ಕಾರ್ಯಕರ್ತರನ್ನು ಅರೆಸ್ಟ್ ಮಾಡಿ ವಿನಾಕಾರಣ ಒಳಗೆ ಕೂರಿಸಿದಾಗ ನಾನು ಅಧಿಕಾರಯುತವಾಗಿಯೇ ಮಾತನಾಡೋದು. ಒಬ್ಬ ನಿರಪರಾಧಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋದು ನನ್ನ ಜವಾಬ್ದಾರಿ. ಮೊನ್ನೆನೂ ಅಷ್ಟೇ ಮಾತನಾಡಿದ್ದು. ಜನತಾ ಪಾರ್ಟಿಯ ಕಾರ್ಯಕರ್ತರ ಪರವಾಗಿ, ಬೆಳ್ತಂಗಡಿಯ ಮತದಾರರಿಗೆ ಅನ್ಯಾಯ ಆಗುತ್ತೆ ಅಂತಾದ್ರೆ ನಾನು ಜೈಲಲ್ಲಿ ಕೂರಲೂ ರೆಡಿ ಇದ್ದೇನೆ ಎಂದ್ರು. ಜಿಲ್ಲಾ ವರಿಷ್ಠಾಧಿಕಾರಿ, ಎಸ್ ಪಿ ತಲೆಯಲ್ಲಿ ಕೂದಲಿಲ್ಲ ಅಂದುಕೊಂಡಿದ್ದೆ, ಆದ್ರೆ ಒಳಗೆ ಮೆದುಳೂ ಇಲ್ಲ ಅಂತ ಈಗ ಗೊತ್ತಾಯ್ತು ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES