Sunday, September 8, 2024

ಅಂಜಲಿ ಹತ್ಯೆ ಆರೋಪಿ ಗಿರೀಶ್​ ಕೊನೆಗೂ ಸಿಐಡಿ ವಶಕ್ಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಅಂಜಲಿ ಅಂಬಿಗೇರ ಹತ್ಯೆಯ ರಹಸ್ಯವನ್ನು ಆರೋಪಿ ವಿಶ್ವ ಬಾಯ್ಬಿಟ್ಟಿದ್ದಾನೆ.

ಅಂಜಲಿ ಅಂಬಿಗೇರ ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ವಿಶ್ವ ಪೊಲೀಸ್ ಬಲೆಗೆ ಬಿದ್ದಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಇದನ್ನೂ ಓದಿ: ಅಂಜಲಿ ಹತ್ಯೆಗೆ ಅಸಲಿ ಕಾರಣ ಬಿಚ್ಚಿಟ್ಟ ಆರೋಪಿ ​

ಈ ಪ್ರಕರಣದ ತನಿಖೆಯ ಹೊಣೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಅದರಂತೆ, ನ್ಯಾಯಾಲಯದ ಅನುಮತಿ ಪಡೆದು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಆಗಮಿಸಿರುವ ಸಿಐಡಿ ಎಸ್‌ಪಿ ವೆಂಕಟೇಶ್‌ ನೇತೃತ್ವದ ಅಧಿಕಾರಿಗಳ ತಂಡ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿತು. ಈ ವೇಳೆ ಹತ್ಯೆಗೆ ಪ್ರಮುಖ ಕಾರಣವನ್ನು ಆರೊಪಿ ಬಾಯಿ ಬಿಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.

RELATED ARTICLES

Related Articles

TRENDING ARTICLES