Friday, July 5, 2024

ಹನುಮ ಜನ್ಮಭೂಮಿಗೆ ಅನುದಾನ, ನಟ ಚೇತನ್ ವಿರೋಧ

ಚಿಕ್ಕೋಡಿ: ಅಂಜನಾದ್ರಿಯ ಹನುಮ ಮಂದಿರ ಅಭಿವೃದ್ದಿಗೆ ಸಿದ್ದರಾಮಯ್ಯ ಸರ್ಕಾರದಿಂದ ಹಣ ನೀಡಿಕೆ ವಿಚಾರಕ್ಕೆ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ.

ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದರು, ಅದೇ ಹಣವನ್ನ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಕೆ ಮಾಡುವಂತೆ ಚೇತನ ಒತ್ತಾಯ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದ ರಾಮನಗರ ಅಲೆಮಾರಿ ಜನಾಂಗದವರಿಗೆ ಸೂರು ನೀಡುವಂತೆ ನಟ ಚೇತನ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್: ಜೂನ್​ 1ರಿಂದ ಮದ್ಯ ಮಾರಟ ಸ್ಥಗಿತ

ಇಲ್ಲಿನ 82 ಕುಟುಂಬಗಳು ಇನ್ನೂ ಕೂಡ ಬಡತನದಲ್ಲಿದ್ದು, ಗುಡಿಸಲಿನಲ್ಲಿ ಬದುಕು ಸಾಗಿಸುತ್ತಿವೆ. ಅಲೆಮಾರಿ ಜನಾಂಗಕ್ಕೆ ಬಜೆಟ್​ನಲ್ಲಿ ಒಂದು ರೂಪಾಯಿ ನೀಡಿಲ್ಲ. ಅದನ್ನ ಬಿಟ್ಟು ಹನುಮನ ಜನ್ಮ ಭೂಮಿಗೆ 100ಕೋಟಿ ಕೊಡೋದು ಸರ್ಕಾರದ ಆದ್ಯತೇನಾ ಎಂದು ಪ್ರಶ್ನಿಸಿದ್ದಾರೆ. ಇನ್ನು, ಜಾತಿ ಜನಗಣತಿ ಬಿಡುಗಡೆ ಮಾಡುವಂತೆ ಸಹ ನಟ ಚೇತನ್ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES