ಬೆಂಗಳೂರು: ರಾಜ್ಯದಲ್ಲಿ ಜೂನ್ ಮೊದಲ ವಾರದಿಂದ ಮುಂಗಾರು ಪ್ರವೇಶಿಸಲಿದ್ದು, ಜೂನ್ 13 ಅಥವಾ 14ರಂದು ರಾಜಧಾನಿ ಬೆಂಗಳೂರಿನಲ್ಲಿ ಮಾನ್ಸೂನ್ ಮಳೆಗಾಲ ಆರಂಭವಾಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವರದಿಯ ಪ್ರಕಾರ, ನೈಋತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕ್ರೊಡೀಕರಣಗೊಂಡಿದೆ. ನೈಋತ್ಯ ಮುಂಗಾರು ಜೂನ್ 1 ಅಥವಾ 2ರಂದು ಕೇರಳ ಕರಾವಳಿಗೆ ತಲುಪುವ ಸಾಧ್ಯತೆ ಇದೆ. ಇದು ಜೂನ್ 6 ಅಥವಾ 7 ರಂದು ದಕ್ಷಿಣ ಕನ್ನಡದ ಮೂಲಕ ಕರ್ನಾಟಕ ಕರಾವಳಿಯನ್ನು ಪ್ರವೇಶಿಸಲಿದ್ದು, ಜೂನ್ 14 ರ ವೇಳೆಗೆ ಕ್ರಮೇಣ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಹರಡಲಿದೆ ಎಂದು ಹಿರಿಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಶಕ್ತಿ ಗ್ಯಾರಂಟಿ ಎಫೆಕ್ಟ್: ಬಸ್ ನಲ್ಲಿ ವಿದ್ಯಾರ್ಥಿಗಳ ಜೀವಕ್ಕಿಲ್ಲ ಗ್ಯಾರಂಟಿ
ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ನಿಂತಿದ್ದರೂ, ಈ ತಿಂಗಳ ಅಂತ್ಯದ ವೇಳೆಗೆ ನಗರಕ್ಕೆ ಮತ್ತೆ ಮಳೆ ಮರಳಲಿದೆ. ಜೂನ್ ಎರಡನೇ ವಾರದಲ್ಲಿ ಮುಂಗಾರು ನಗರಕ್ಕೆ ಆಗಮಿಸಲಿದೆ.