ದೆಹಲಿ: ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ವಿದೇಶಾಂಗ ಸಚಿವಾಲಯ ಮೊದಲ ಬಾರಿ ಬಿಗ್ ಶಾಕ್ ಕೊಟ್ಟಿದೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ SIT ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರ ಬೆನ್ನಲೇ ಇದೀಗ ವಿದೇಶಾಂಗ ಸಚಿವಾಲಯವು, ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶೀಘ್ರದಲ್ಲೇ ಉತ್ತರ ನೀಡುವಂತೆ ತಾಕೀತು ಮಾಡಲಾಗಿದೆ. ಇದರಿಂದ ಪ್ರಜ್ವಲ್ಗೆ ಹಂತ ಹಂತವಾಗಿ ಸಂಕಷ್ಟು ಶುರುವಾದಂತಾಗಿದೆ. ಪ್ರಜ್ವಲ್ ಉತ್ತರಿಸದಿದ್ರೆ ಪ್ರಜ್ವಲ್ ಪ್ರಯಾಣದ ಮೇಲೆ ನಿರ್ಬಂಧ ಹೇರುವ ಸಾಧ್ಯತೆಯಿದೆ.
ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ
ಹಾಸನದಲ್ಲಿ ಲೋಕಸಭಾ ಚುನಾವಣೆ ಮತದಾನದ ಬಳಿಕ ವಿದೇಶಕ್ಕೆ ಹಾರಿದ ಸಂಸದ ಪ್ರಜ್ವಲ್ ರೇವಣ್ಣ ಕಳೆದ 28 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ದೇಶಕ್ಕೆ ವಾಪಾಸ್ ಆಗಿ SIT ತನಿಖೆಗೆ ಸಹಕರಿಸುವಂತೆ ಮಾಜಿ ಮಾಜಿ ಪ್ರಧಾನಿ ದೇವೇಗೌಡ ಹಾಗು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದರೂ ಇದುವರೆಗೂ ಯಾವುದಕ್ಕೂ ಪ್ರತಿಕ್ರಿಯೆ ನೀಡದ ಪ್ರಜ್ವಲ್ ನನ್ನು ವಶಕ್ಕೆ ಪಡೆಯುವ ಸಲುವಾಗಿ ಭಾರತದ ವಿದೇಶಾಂಗ ಸಚಿವಾಲು ಶೋಕಾಸ್ ನೀಡಿದೆ.