Wednesday, July 3, 2024

ಪೊಲೀಸರ ತಲೆ ಕಡೀತೇವೆ ಅಂದ್ರೆ ಸುಮ್ಮನಿರಲ್ಲ: ಗೃಹಸಚಿವ ಪರಮೇಶ್ವರ್​

ಬೆಂಗಳೂರು: ಚನ್ನಗಿರಿಯಲ್ಲಿ ವ್ಯಕ್ತಿಯನ್ನು ಬಂಧಿಸಿದ ಏಳು ನಿಮಿಷದಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆ ಯಲ್ಲಿ ಕಾರಣ ತಿಳಿದುಬರುತ್ತದೆ. ಆದರೆ ಪೊಲೀಸ್ ಠಾಣೆಗೆ ಬಂದು ಧಮ್ಮಿ ಹಾಕುತ್ತೇವೆ ಎನ್ನುವವರನ್ನು ಬಿಡುವುದಿಲ್ಲ. ಪೊಲೀಸರ ತಲೆ ಕಡೀತೇವೆ ಅನ್ನುವವರ ಬಿಡಲ್ಲ. ಅಂತಹವರ ಮೇಲೆ ಮುಲಾಜಿಲ್ಲದೇ ಕ್ರಮ ಆಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ದುರಂತ: 6 ನವಜಾತ ಶಿಶುಗಳು ಸಾವು

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವನ್ನಪ್ಪಿರುವುದನ್ನು ಲಾಕಪ್ ಡೆತ್ ಎಂದು ಆರೋಪಿಸಲಾಗಿದೆ. ಆ ವ್ಯಕ್ತಿ ಮೇಲೆ ದೂರು ಬಂದಿದ್ದರಿಂದ ಪೊಲೀಸರು ವಿಚಾರಣೆಗೆ ಕರೆ ತಂದಿದ್ದರು. ಏಳು ನಿಮಿಷದಲ್ಲಿ ಆರೋಗ್ಯದಲ್ಲಿ ಸಮಸ್ಯೆಯಾಗಿ ತೀರಿಕೊಂಡಿದ್ದಾರೆ.

ಇದನ್ನು ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಅಂತ ತಿಳಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗುವ ಪ್ರಯತ್ನ ಮಾಡಿದ್ದಾರೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಎಂದು ಅವರು ಸ್ಪಷ್ಟಪಡಿಸಿದರು.

RELATED ARTICLES

Related Articles

TRENDING ARTICLES