Sunday, September 8, 2024

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮೈದುನನ ಬರ್ಬರ ಹತ್ಯೆ

ಕಲಬುರ್ಗಿ: ತನ್ನ ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಬಿಟ್ಟುಬಿಡು ಎಂದಿದಕ್ಕೆ ವ್ಯಕ್ತಿಯೋರ್ವ ಮೈದುನನ್ನು ಭೀಕರವಾಗಿ ಕೊಲೆಮಾಡಿರು ಘಟನೆ ಜಿಲ್ಲೆಯ ಆಳಂದ ತಾಲ್ಲೂಕಿನ ಮುನೋಳ್ಳಿ ಗ್ರಾಮದಲ್ಲಿ ನಡೆದಿದೆ.

ಹೀರಾಲಾಲ್​ ಲದಾಫ್​ (35) ಮೃತ ಮೈದುನ, ರವಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ, ಕೊಲೆ ಮಾಡಿದ ಆರೋಪಿ,

ಕೊಲೆಯಾದ ಹೀರಾಲಾಲ್ ಅತ್ತಿಗೆ ಜೊತೆ ರವಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ, ಹೀರಾಲಾಲ್ ಅಣ್ಣ ಬಾಬು ಲದಾಫ್ ತನ್ನ ಪತ್ನಿಯ ಅನೈತಿಕ ಸಂಬಂಧ ಕಂಡು ರವಿ ಇಂದ ದೂರ ಇರುವಂತೆ ಪತ್ನಿಗೆ ಎಚ್ಚರಿಕೆ ನೀಡಿದ್ದ. ಆದರೇ, ಬಾಬು ಲದಾಫ್ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನ ಮೇಲೆ ಹಲ್ಲೆ ಮಾಡಿದ್ದಳು. ಇದರಿಂದ ಮಾನಸಿಕವಾಗಿ ನೊಂದಿದ್ದ ಬಾಬು ಲದಾಫ್​ ತನ್ನ ಊರನ್ನೇ ಬಿಟ್ಟು ಹೋಗಿದ್ದ.

ಇದನ್ನೂ ಓದಿ: ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಸಾವು

ಇದೇ ವಿಚಾರಕ್ಕೆ ಬಾಬು ಲದಾಫ್​ ಸಹೋದರ ಹೀರಾಲಾಲ್​ ಮತ್ತು ರವಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಲೆ ಇತ್ತು. ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿ ಅನೈತಿಕ ಸಂಬಂಧ ಬಿಟ್ಟು ಬಿಡುವಂತೆ ರವಿಗೆ ಹೀರಾಲಾಲ್​ ಎಚ್ಚರಿಕೆ ನೀಡಿದ್ದ. ಮೊನ್ನೆ ಕುಡಿದ ನಶೆಯಲ್ಲಿ ಗಲಾಟೆ ಮಾಡಿಕೊಂಡ ರವಿ, ಬಳಿಕ ಹೀರಾಲಾಲ್​ ಮೇಲೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ದ. ಕೂಡಲೇ ಹೀರಾಲಾಲ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

RELATED ARTICLES

Related Articles

TRENDING ARTICLES