Sunday, October 6, 2024

ಬಂಧನ ಭೀತಿ: ದೇಶಕ್ಕೆ ಆಗಮಿಸುವ ಮುನ್ನವೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್​ ರೇವಣ್ಣ

ಬೆಂಗಳೂರು: ಪೆನ್​ಡ್ರೈವ್​ ಪ್ರಕರಣದ ಪ್ರಮುಖ ರೂವಾರಿ ಪ್ರಜ್ವಲ್​ ರೇವಣ್ಣ ವಿದೇಶದಿಂದ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಬಂಧನ ಭೀತಿಯಿಂದ ಆಗಮನಕ್ಕೂ ಮುನ್ನವೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಪರ ವಕೀಲ ಅರುಣ್​ ಅವರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಸಲ್ಲಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಬರಲು ಪ್ರಜ್ವಲ್ ವಿಮಾನ ಟಿಕೆಟ್ ಬುಕ್

ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ವೀಡಿಯೋಗಳ ಪೆನ್​ಡ್ರೈವ್​ ಪ್ರಕರಣದ ಸುದ್ದಿ ಪವರ್​ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ ಏಪ್ರಿಲ್​ 26 ರಂದು ಲೋಕಸಭಾ ಚುನಾವಣೆ ಮತದಾನದ ಬಳಿಕ ರಾತ್ರೋ ರಾತ್ರಿ ವಿದೇಶಕ್ಕೆ ಪರಾರಿಯಾಗಿ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿದ್ದರು.

31 ದಿನಗಳ ಬಳಿಕ ವಿದೇಶದಿಂದ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ ಪ್ರಜ್ವಲ್​, ಮೇ 30 ರಂದು ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದರು. ಇದೀಗ ಸ್ವದೇಶಕ್ಕೆ ಆಗಮಿಸುತ್ತಿರುವ ಪ್ರಜ್ವಲ್ ಗೆ ಬಂಧನ ಭೀತಿ ಎದುರಾಗಿದೆ. ಇದರಿಂದಾಗಿ ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.

RELATED ARTICLES

Related Articles

TRENDING ARTICLES