Wednesday, July 3, 2024

ಜೆಡಿಎಸ್​ ಸ್ಪರ್ಧಿಸಿರೋ 3 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ: ಹೆಚ್​.ಡಿ ರೇವಣ್ಣ

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಸ್ಪರ್ಧಿಸಿರುವ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲಲಿದೆ ಎಂದು ಹೊಳೆನರಸೀಪುರ ಶಾಸಕ ಹೆಚ್​.ಡಿ ರೇವಣ್ಣ ತಿಳಿಸಿದ್ದಾರೆ.

ಹಾಸನದ ಹೊಳೆನರಸಿಪುರದಲ್ಲಿ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ಎಕ್ಸಿಟ್​ ಪೋಲ್​ ಬಗ್ಗೆ ನಾನು ಇವತ್ತು ಏನು ಹೇಳುವುದಿಲ್ಲ, ಈ ದೇಶ ಉಳಿಯಬೇಕಾದರೆ ಮೋದಿ ಪ್ರಧಾನಿ ಆಗಬೇಕು ಅಷ್ಟೆ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ಪರ್ಧಿಸಿರುವ ಎಲ್ಲಾ ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ಭವಿಷ್ಯ- ಮೋದಿ ಪ್ರತಿಕ್ರಿಯೆ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ನಮ್ಮ ಎಲ್ಲಾ ಶಾಸಕರುಗಳು ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸ್ವಾತಂತ್ರ ಬಂದ ನಂತರ ಶಿಕ್ಷಣ ಕ್ಷೇತ್ರಕ್ಕೆ ಏನಾದ್ರು ಕೊಡುಗೆ ನೀಡಿದ್ದರೆ ಅದು ಕುಮಾರಸ್ವಾಮಿ ಮಾತ್ರ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ‌ಸೌಲಭ್ಯ, ಶಿಕ್ಷಕರ ನೇಮಕಾತಿ ಎಲ್ಲವನ್ನೂ ಮಾಡಿದ್ದಾರೆ.  ಈ ಬಾರಿ ಬಿಜೆಪಿ ಜೆಡಿಎಸ್ ಎರಡೂ ಪಕ್ಷ ಸೇರಿ ಚುನಾವಣೆ ಎದುರಿಸುತ್ತಿದ್ದೇವೆ. ನಮ್ಮ ಅಭ್ಯರ್ಥಿ ವಿವೇಕಾನಂದ ನೂರಕ್ಕೆ ನೂರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ಅವರು ಹೇಳಿದರು.

 

RELATED ARTICLES

Related Articles

TRENDING ARTICLES