ದೆಹಲಿ: ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ.
ಎನ್ಡಿಎ ಸರ್ಕಾರವನ್ನು ಮರು ಆಯ್ಕೆ ಮಾಡಲು ಜನರು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ವಿಶ್ವಾಸದಿಂದ ಹೇಳಬಲ್ಲೆ, ಅವಕಾಶವಾದಿ INDIA ಬಣ ಮೈತ್ರಿ ಮತದಾರರನ್ನು ಸೆಳೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ ಅವರು, ವಿಪಕ್ಷಗಳ ಮೈತ್ರಿಕೂಟವನ್ನು ಜಾತಿವಾದಿ, ಕೋಮುವಾದಿ ಮತ್ತು ಭ್ರಷ್ಟಾಚಾರಿಗಳ ಕೂಟ ಎಂದು ಕರೆದರು.
ಇದನ್ನು ಓದಿ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಅರೆಸ್ಟ್: ಬಂಧನ ಭೀತಿಯಲ್ಲಿ ಭವಾನಿ
ಚುನಾವಣೆ ಪ್ರಚಾರದ ಮೂಲಕ ವಿಪಕ್ಷಗಳ ಮೈತ್ರಿಕೂಟ ಮೋದಿಯನ್ನು ಧಿಕ್ಕರಿಸುವಲ್ಲಿ ತನ್ನ ಪರಿಣತಿಯನ್ನು ಹೆಚ್ಚಿಸಿಕೊಂಡಿದೆ. ಜನರು ಅಂತಹ ಪ್ರತಿಗಾಮಿ ರಾಜಕೀಯವನ್ನು ತಿರಸ್ಕರಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.