Monday, July 8, 2024

ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಕೊನೆಗೂ ಅರೆಸ್ಟ್

ಬೆಂಗಳೂರು: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್​​ನನ್ನೂ ಎಸ್​ಐಟಿ ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ.

ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್​​ನನ್ನು ಎಸ್​ಐಟಿ ಬಂಧಿಸಿತ್ತು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ಮಾಹಿತಿ ಆಧರಿಸಿ ಚಿಕ್ಕಮಗಳೂರಿನಲ್ಲಿ ಎಸ್​ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು. ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಅಜಿತ್ ಮೇಲಿದೆ.

ಇದನ್ನೂ ಓದಿ: ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್​: ಮಧ್ಯಂತರ ನಿರೀಕ್ಷಣಾ ಜಾಮೀನು ಮಜೂರು

ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪ ಕೂಡ ಇದೆ. ಭವಾನಿ ಸೂಚನೆ ಮೇರೆಗೆ ಅಜಿತ್ ಸಂತ್ರಸ್ತೆಯನ್ನು ಮನೆಯಿಂದ ಕರೆದೊಯ್ದ ಎನ್ನಲಾಗಿತ್ತು. ಕಿಡ್ನ್ಯಾಪ್​ ಬಗ್ಗೆ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಮಗ ದೂರು ನೀಡಿದ್ದ. ಇದರ ಅನ್ವಯ ಭವಾನಿ ಕಾರು ಚಾಲಕ ಅಜಿತ್ ವಿರುದ್ಧ ಎಸ್​ಐಟಿ ಎಫ್​ಐಆರ್ ದಾಖಲಿಸಿತ್ತು.

RELATED ARTICLES

Related Articles

TRENDING ARTICLES