ಹೈದರಾಬಾದ್: ಬೆಂಗಳೂರಿನ ರೇವ್ ಪಾರ್ಟ್ ಪಾರ್ಟಿ ಪ್ರಕರಣದಲ್ಲಿ ಆರೋಪಿಯಾಗಿರುವ ತೆಲುಗು ನಟಿ ಹೇಮಾ ಈಗಾಗಲೇ ಬಂಧನದಲ್ಲಿದ್ದಾರೆ. ಈ ನಡುವೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದ್ದು ತೆಲುಗು ಕಲಾವಿದರ ಸಂಘದಿಂದ ಹೇಮಾರನ್ನು ಅಮಾನತ್ತು ಮಾಡಲಾಗಿದೆ.
ನಟಿ ಹೇಮಾರನ್ನು ಜೂನ್ 14ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸುವಂತೆ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಇದೀಗ ರೇವ್ ಪಾರ್ಟಿ ಪ್ರಕರಣ ಇತ್ಯರ್ಥ ಆಗೋ ವರೆಗೂ ತೆಲುಗು ಕಲಾವಿದರ ಸಂಘದಿಂದ ಹೇಮಾರನ್ನು ಅಮಾನತು ಮಾಡಲಾಗಿದೆ. ಈ ನಿರ್ಧಾರವನ್ನು ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಕೈಗೊಂಡಿದ್ದಾರೆ.
ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮ
ಇತ್ತೀಚೆಗೆ ಮಂಚು ವಿಷ್ಣು ಅವರು, ಹೇಮಾ ಅವರು ತಪ್ಪು ಮಾಡಿದ್ದನ್ನು ಪೊಲೀಸರು ಸಾಬೀತುಪಡಿಸಿದರೆ ಖಂಡಿತಾ ಕಲಾವಿದರ ಸಂಘದಿಂದ ಹೇಮಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಇದೇ ವಿಚಾರವಾಗಿ ಬುಧವಾರ ಹೈದರಾಬಾದ್ನಲ್ಲಿ ನಡೆದ ಟಾಲಿವುಡ್ನ ‘ಮಾ’ ಅಸೋಸಿಯೇಷನ್ ಸಭೆ ನಡೆದಿತ್ತು. ಈ ಸಭೆಯಲ್ಲಿ ಯಾವುದೇ ನಿರ್ಣಯಗಳನ್ನು ಕೈಗೊಳ್ಳಲಾಗಿಲ್ಲ. ಇದೇ ವಿಚಾರವಾಗಿ ಮತ್ತೆ ಗುರುವಾರ ಸಭೆ ಮುಂದುವರೆದಿದ್ದು ಸಭಯಲ್ಲಿ ಹೆಚ್ಚಿನ ಸದಸ್ಯರು ನಟಿ ಹೇಮಾ ಅಮಾನತ್ತಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಸೂಚನೆ ಬೆನ್ನಲೇ ನಟಿ ಹೇಮಾ ಅವರನ್ನು ಪ್ರಕರಣ ಇತ್ಯರ್ಥವಾಗುವವರೆಗೂ ತೆಲುಗು ಕಲಾವಿದರ ಸಂಘದಿಂದ ಅಮಾನತು ಮಾಡಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಮಂಚು ವಿಷ್ಣು ತಿಳಿಸಿದ್ದಾರೆ.