Sunday, September 8, 2024

ಬಿ.ವೈ ರಾಘವೇಂದ್ರಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಲೆಂದು ಪೂಜೆ

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಪ್ರಧಾನಿ ನರೇಂದ್ರ ಮೋದಿಯ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಯುವಕರು ಪ್ರಾರ್ಥಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಸೊರಬದ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿ ಗ್ರಾಮದ ಶಕ್ತಿ ದೇವತೆ ಶ್ರೀ ರೇಣುಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಿ.ವೈ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನತೆ ಅಪೂರ್ವ ಬೆಂಬಲ ಸೂಚಿಸಿ ಪುನಃ ಸಂಸದರಾಗಿ ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: ನಾನೀಗ ರಾಜಕಾರಣಿ, ಸಿನಿಮಾ ಮಾಡುವುದು ಕಂಪ್ಲೀಟ್​ ಬಂದ್​ ಮಾಡಿದ್ದೇನೆ: ನಿಖಿಲ್​ ಕುಮಾರಸ್ವಾಮಿ

ಈ ಹಿಂದೆಯೂ ಚುನಾವಣೆ ಪೂರ್ವದಲ್ಲಿ ರಾಘವೇಂದ್ರ ಅವರು ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದಿದ್ದರು. ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ, ವಿಶೇಷ ಪೂಜೆ ನೆರವೇರಿಸಿದ್ದರು.

RELATED ARTICLES

Related Articles

TRENDING ARTICLES