Wednesday, July 3, 2024

ಚಂದನ್​ ಶೆಟ್ಟಿ-ನಿವೇದಿತಾ ಡೈವೋರ್ಸ್​: ನಟ ಪ್ರಥಮ್​ ಪ್ರತಿಕ್ರಿಯೆ

ಮಂಡ್ಯ: ಬಿಗ್​ ಬಾಸ್​ ಸೀಸನ್​-5 ಕನ್ನಡದ ಸ್ಪರ್ಧಿಗಳಾದ ಕನ್ನಡದ ರ್ಯಾಪರ್​ ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಚೇದನದ ಬಗ್ಗೆ ನಟ ಪ್ರಥಮ್​ ಪ್ರತಿಕ್ರಿಯೆ ನೀಡಿದ್ದು, ಚಂದನ್​ ಮತ್ತು ನಿವೇದಿತಾ ಮಧ್ಯೆ ನಟ ಧ್ರುವ ಸರ್ಜಾ ಮಧ್ಯಸ್ಥಿಕೆ ವಹಿಸಿದರೆ ಎಲ್ಲವೂ ಸರಿಯಾಗುತ್ತದೆ ಎಂದು ನಟ ಪ್ರಥಮ್ ಹೇಳಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಚಂದನ್, ನಿವೇದಿತಾ ಬೇರ್ಪಟ್ಟ ಮಾತ್ರಕ್ಕೆ ಅವರಿಬ್ಬರೂ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಆಗ್ತಾರಾ? ಒಂದು ಶೋ ಮುಖ್ಯನಾ ಜೀವನ ಮುಖ್ಯನಾ ಎಂದು ಯೋಚನೆ ಮಾಡಿದರೆ ಜೀವನವೇ ಮುಖ್ಯ, ಚೆನ್ನಾಗಿ ಬದುಕಬೇಕು. ಕೆರಿಯರ್ ಬಗ್ಗೆ ಯೋಚಿಸದೆ ಇಬ್ಬರು ಮದುವೆ ಆಗಿಲ್ಲಾ. ಎಲ್ಲವನ್ನು ಯೋಚಿಸಿಯೇ ಅವರು ಮದುವೆ ಆಗಿದ್ದಾರೆ. ಸುಂದರವಾದ ಬದುಕು, ಇಬ್ಬರು ಚೆನ್ನಾಗಿ ಬದುಕುಬೇಕು ಎಂದರು.

ಧ್ರುವ ಅವರ ಮಾತನ್ನು ಚಂದನ್ ಕೇಳುತ್ತಾರೆ. ನಿವೇದಿತಾ-ಚಂದನ್ ವಿಚ್ಛೇದನ ವಿಚಾರದಲ್ಲಿ ಧ್ರುವ ಸರ್ಜಾ ಮಧ್ಯಸ್ಥಿಕೆ ವಹಿಸಲಿ. ಚಂದನ್‌ಗೆ ಒಳ್ಳೆಯದಾಗಲಿ ಎಂದು ಧ್ರುವ ಪೊಗರು ಸಿನೆಮಾದಲ್ಲಿ ಅವಕಾಶ ಕೊಟ್ಟರು. ಪ್ರೀತಿ ಇದ್ದರೆ ಚಂದನ್, ಧ್ರುವ ಮಾತನ್ನು ಕೇಳುತ್ತಾರೆ. ಮಿಲನಾ ಸಿನಿಮಾದಲ್ಲಿ ವಿಚ್ಛೇದನ ಬಳಿಕವೂ ಒಂದಾಗಲ್ವಾ? ಇಚ್ಛಾಶಕ್ತಿ ಬೇರಾವುದು ದೊಡ್ಡದಲ್ಲ. ನಾನು ಮಿಲನಾ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಚಂದನ್‌ಗೆ ಕಳುಹಿಸುತ್ತೇನೆ. ಅದನ್ನು ನೋಡಿಯಾದರೂ ಚಂದನ್ ಮನಸ್ಸು ಬದಲಾಗಲಿ ಎಂದು ಹೇಳಿದರು.
ಯುವ ದಸರಾ ವೇದಿಕೆಯಲ್ಲಿ ಚಂದನ್ ಪ್ರಪೋಸ್ ಮಾಡಿದ್ದು ನನಗೆ ಎಫೆಕ್ಟ್ ಆಗಿತ್ತು. ಆ ಘಟನೆಯಿಂದ ಯುವ ದಸರಾ ವೇದಿಕೆಯಲ್ಲಿ ನನ್ನ ಸಿನಿಮಾ ಪ್ರೊಮೋಷನ್‌ಗೆ ಅವಕಾಶ ಸಿಗಲಿಲ್ಲ. ಅದರಿಂದ ಚಂದನ್ ಮೇಲೆ ಕೆಲದಿನ ಕೋಪ ಮಾಡಿಕೊಂಡಿದ್ದೆ. ಬಳಿಕ ಪರಸ್ಪರ ಮಾತನಾಡಿದಾಗ ನಾವಿಬ್ಬರು ಒಳ್ಳೆಯ ಸ್ನೇಹಿತರಾದೆವು. ಚಂದನ್‌ಗೆ ಕೇಳುವ ವಿವೇಚನೆ ಇದೆ. ಅರೇಂಜ್ ಮ್ಯಾರೇಜ್ ಆದರೆ ಕಂಟ್ರೋಲ್ ಇರುತ್ತದೆ. ಲವ್ ಮ್ಯಾರೇಜ್ ಆದರೆ ನಮ್ಮ ಜುಟ್ಟು ಅವರ ಕೈಯಲ್ಲಿರುತ್ತದೆ. ಈ ಹಿಂದೆ ಯಾವ ವಿಚ್ಛೇದನವೂ ಇರಲಿಲ್ಲ. ನಮ್ಮ ಹಿರಿಯರು ನೂರಾರು ಕಾಲ ದಾಂಪತ್ಯ ಜೀವನ ನಡೆಸಿಲ್ವಾ ಎಂದು ಉದಾಹರಣೆ ನೀಡಿದರು.
ನಿಮ್ಮ ನಿರ್ಧಾರ ಸರಿ ಎನ್ನುವವರು ಯಾರೂ ಕಷ್ಟದಲ್ಲಿ ಬರಲ್ಲ. ಹಾಳಾಗಲಿ ಎನ್ನುವವರ ಮಧ್ಯೆ ಚೆನ್ನಾಗಿ ಬದುಕು ಚಂದನ್. ಅವರಿಬ್ಬರನ್ನು ಒಂದು ಮಾಡುವಂತೆ ಜನರು ನನಗೆ ಮೆಸೆಜ್ ಮಾಡುತ್ತಿದ್ದಾರೆ. ನನ್ನ ಮಾತು ಕೇಳ್ತಾರಾ ಅವರು? ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

RELATED ARTICLES

Related Articles

TRENDING ARTICLES