Friday, July 5, 2024

ಡಿಕೆ ಸುರೇಶ್​ ಸೋಲಿಗೆ ಸಿದ್ದರಾಮಯ್ಯ ಅಂಡ್​ ಟೀಂ ಕಾರಣ: ಶಾಸಕ ಸುರೇಶ್ ಗೌಡ

ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್‌ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರೆಯಬೇಕು ಅಂತ ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸಿದ್ದಾರೆ. ನಾನು ಹೇಳಿದ್ದೆ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ ಸುರೇಶ್ ಅವರನ್ನ ಸೋಲಿಸ್ತಾರೆ ಅಂತಾ ಚುನಾವಣೆಯ ಮೊದಲು ಒಂದು ತಿಂಗಳ ಹಿಂದೆಯೇ ಹೇಳಿದ್ದೆ. ನಾನು ಹೇಳಿದ್ದೆ ರಿಪೀಟ್ ಆಗಿದೆ.

ಇದನ್ನೂ ಓದಿ: ಜನರಿಗೆ ಕಾಂಗ್ರೆಸ್​ ಗ್ಯಾರೆಂಟಿ ಇಷ್ಟ ಆಗಿಲ್ಲ, ಯೋಜನೆ ನಿಲ್ಲಿಸುವ ಬಗ್ಗೆ ಸಿಎಂ ಮರು ಪರಿಶೀಲನೆ ಮಾಡಬೇಕು: ಲಕ್ಷ್ಮಣ್​

ಡಿಕೆ ಸುರೇಶ್​ ಅವರನ್ನು ಬಿಜೆಪಿ ಅಭ್ಯರ್ಥಿ ಎರಡು ಲಕ್ಷ ಮತಗಳ ಅಂತರದಿಂದ ಸೋಲಿಸ್ತಾರೆ ಅಂತಾ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಬಿಜೆಪಿ ಶಾಸಕ ಸುರೇಶ್‌ಗೌಡ ಹೇಳಿದ್ದಾರೆ.

RELATED ARTICLES

Related Articles

TRENDING ARTICLES