Wednesday, July 3, 2024

ಪವಿತ್ರಾ ಗೌಡಗೆ ಮೆಸೇಜ್​ ಮಾಡಿದ್ದಕ್ಕೆ ನಟ ದರ್ಶನ್​ನಿಂದ ಯುವಕನ ಕೊಲೆ

ಬೆಂಗಳೂರು: ಗೆಳತಿ ಪವಿತ್ರಾಗೌಡಗೆ ಮೆಸೇಜ್​ ಮಾಡಿದ ಎಂಬ ಕಾರಣಕ್ಕೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್​ವುಡ್​ ನಟ ದರ್ಶನ್​ ನನ್ನು ಕೊಲೆ ಆರೋಪದಡಿ ಇಂದು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್​ ಫಾರ್ಮ್​ ಹೌಸ್​ನಲ್ಲಿ ದರ್ಶನನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಂಧನ!

ದರ್ಶನ ಜೊತೆಗಿನ ಫೋಟೋಗಳನ್ನು ದರ್ಶನ್​ ಗೆಳತಿ ಪವಿತ್ರಾಗೌಡ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ಫೊಟೋಗಳಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಜೂನ್​ 9 ರಂದು ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿಪಾಳ್ಯಕ್ಕೆ ಕರೆತಂದ ವಿನಯ್​ ಎನ್ನುವವರ ಕಾರ್ ಶೆಡ್​ ನಲ್ಲಿ ಇರಿಸಿ ದರ್ಶನ್​ ಸಹಚರರು ರೇಣುಕಾಸ್ವಾಮಿಗೆ ಗಂಭೀರವಾಗಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಹಲ್ಲೆ ಮಾಡಿದ್ದರಿಂದ ಆತ ಸಾವಿಗೀಡಾಗಿದ್ದ. ಬಳಿಕ ಮೃತ ದೇಹವನ್ನು ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಬಿಸಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳು ಪೊಲೀಸ್​ ಠಾಣೆಗೆ ಶರಣಾಗಿದ್ದು, ದರ್ಶನ್​ ಬಗ್ಗೆ ನಟ ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

 

RELATED ARTICLES

Related Articles

TRENDING ARTICLES