Monday, July 1, 2024

ನಟ ದರ್ಶನ್​, ಪವಿತ್ರಾ ಗೌಡರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಬಂಧನದಲ್ಲಿರುವ ನಟ ದರ್ಶನ್​, ಪವಿತ್ರಾ ಗೌಡರನ್ನು 3 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶ ನೀಡಿದ್ದಾರೆ.

ಇಂದು ಬೆಂಗಳೂರಿನ ಸಿಟಿ ಸಿವಿಲ್​ ನ್ಯಾಯಾಲಯದ 24ನೇ ಎಸಿಎಂಎಂ ಕೋರ್ಟ್​ನ ಆರ್ಥಿಕ ಅಪರಾಧಗಳ ನ್ಯಾಯಲಯದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರು 3 ದಿನಗಳ ಕಾಲ ಪೊಲೀಸರ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಂಧನ!

ದರ್ಶನ ಪರ ವಕೀಲರು ಹಾಗು ಪಬ್ಲಿಕ್ ಪ್ರಾಸಿಕ್ಯೂಟರ್​ ವಾದ ವಿವಾದಗಳನ್ನು ಆಲಿಸಿದ ನ್ಯಾ. ವಿಶ್ವನಾಥ್​ ಅವರಿದ್ದ ಪೀಠ ಈ ಆದೇಶವನ್ನು ಹೊರಡಿಸಿದೆ. ನ್ಯಾಯಾಧೀಶರ ಆದೇಶ ಹೊರಬೀಳುತ್ತಿದ್ದಂತೆ ನಟ ದರ್ಶನ್​ ಮತ್ತು ಪವಿತ್ರಾ ಗೌಡ ಅವರು ಜಡ್ಜ್​ ಮುಂದೆಯೇ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ.

ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪವಿತ್ರಾ ಗೌಡ ಹಾಗು ಎ2 ಆರೋಪಿಯಾಗಿ ನಟ ದರ್ಶನನ್ನು ಸೇರಿ ಒಟ್ಟು 13 ಆರೋಪಿಗಳನ್ನು ಪೊಲೀಸ್​ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES