ಬೆಂಗಳೂರು: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಗರದ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಮಾಕ್ಷಿಪಾಳ್ಯದಲ್ಲಿ ಜೂನ್ 9ರಂದು ಭಾನುವಾರ ಸಿಕ್ಕ ಅಪರಿಚಿತ ವ್ಯಕ್ತಿಯ ಶವದ ಆಧಾರದ ಮೇಲೆ ಕಾಮಾಳ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲಿನ ಸಿಸಿಟಿವಿ, ತಾಂತ್ರಿಕ ಸಾಕ್ಷಿಯ ಆಧಾರದ ಮೇಲೆ ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ!
ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿ ಚಲನ ಚಿತ್ರ ನಟ ದರ್ಶನ್ ಹಾಗು ಆತನ ಸಹಚರರನ್ನು ಬಂಧನಮಾಡಲಾಗಿದೆ. ಇಂದು ಸಂಜೆ ವೇಳೆಗೆ ನಟ ದರ್ಶನ್ ಹಾಗೂ ಸಹಚರರನ್ನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಒಳಸಂಚಿನ ಆರೋಪದಲ್ಲಿ ಪವಿತ್ರಾ ಗೌಡ ಎಂಬುವವರನ್ನು ಬಂಧನ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.