Monday, July 1, 2024

ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಂಧನ!

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಅವರನ್ನು ಇಂದು ಪೊಲಿಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್​ ಹೌಸ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದು ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ  ಸಾವನ್ನಪ್ಪಿದ್ದ.

ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್​ ಮಾಡುತ್ತಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಗಂಭೀರವಾಗಿ ಥಳಿಸಿ, ಮರ್ಮಾಂಗಕ್ಕೆ ಹಲ್ಲೆ ಮಾಡಿದ ಹಿನ್ನೆಲೆ ರೇಣುಕಾಸ್ವಾಮಿ ಸಾವಿಗೀಡಾಗಿದ್ದಾನೆ. ಈ ಘಟನೆ ಸಂಬಂಧ ದರ್ಶನ್ ಸೇರಿದಂತೆ ಹತ್ತು ಮಂದಿಯನ್ನು ಡಿಸಿಪಿ ಗಿರೀಶ್​ ನೇತೃತ್ವದಲ್ಲಿ ಬಂಧನ ಮಾಡಿ ಹೆಚ್ಚಿನ ವಿಚಾರಣೆಗಾಗಿ ಮೈಸೂರಿನಿಂದ ಕರೆತರಲಾಗುತ್ತಿದೆ.​

ನಟ ದರ್ಶನ್​ ವಿರುದ್ದ ಈ ಪ್ರಕರಣದಲ್ಲಿ ಎರಡು ಗಂಭೀರ ಆರೋಪಗಳು ಕೇಳಿಬಂದಿದ್ದು, ಕಾಮಾಕ್ಷಿಪಾಳ್ಯದಲ್ಲಿ ಕೊಲೆ ಮಾಡಿದ ಆರೋಪ ಮತ್ತು ಕಾಮಾಕ್ಷಿಪಾಳ್ಯದಲ್ಲಿ ಮೃತದೇಹವನ್ನು ಬಿಸಾಡಿರುವ ಎರಡು ಆರೋಪಗಳು ಕೇಳಿಬಂದಿದೆ.

ಘಟನೆ ಹಿನ್ನೆಲೆ:

ದರ್ಶನ ಜೊತೆಗಿನ ಫೋಟೋಗಳನ್ನು ಪವಿತ್ರಾಗೌಡ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು.  ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಈ ವಿಚಾರಕ್ಕೆ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು.

RELATED ARTICLES

Related Articles

TRENDING ARTICLES