Monday, July 1, 2024

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್​ ಸೇರಿ 13 ಮಂದಿ ಬಂಧನ

ಬೆಂಗಳೂರು: ನಟ ದರ್ಶನ್​ ಆಪ್ತಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್​, ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ.

ದರ್ಶನ್​, ಪವಿತ್ರಾ ಗೌಡ ಜೊತೆ ವಿ. ವಿನಯ್, ಆರ್.ನಾಗರಾಜು, ಎಂ. ಲಕ್ಷ್ಮಣ್​, ಎಸ್​. ಪ್ರದೋಶ್​, ಕೆ. ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಈಗ ಪೊಲೀಸರ ವಶದಲ್ಲಿ ಇದ್ದಾರೆ. ಇಂದು (ಜೂನ್ 11) ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಂಧನ!

ಕೊಲೆಯಾದ ರೇಣುಕಾ ಸ್ವಾಮಿ ಕೂಡ ದರ್ಶನ್​ ಅಭಿಮಾನಿ ಆಗಿದ್ದ. ಪವಿತ್ರಾ ಗೌಡಗೆ ಮೆಸೇಜ್ ಮಾಡಿದ ಬಗ್ಗೆ ಕೊಲೆಗೂ ಮುನ್ನ ಸ್ನೇಹಿತರ ಬಳಿ ರೇಣುಕಾಸ್ವಾಮಿ ಸ್ನೇಹಿತರ ಬಳಿ ಹೇಳಿಕೊಂಡಿದ್ದ.‘ನಮ್ಮ ಬಾಸ್ ಸಂಸಾರವನ್ನು ಪವಿತ್ರಾ ಗೌಡ ಹಾಳು ಮಾಡಿದ್ದಾಳೆ. ಅದಕ್ಕೆ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದೆ’ ಎಂದು ರೇಣುಕಾ ಸ್ವಾಮಿ ಹೇಳಿಕೊಂಡಿದ್ದ ಎನ್ನಲಾಗಿದೆ.ಇನ್ನು ಈ ಪ್ರಕರಣದಲ್ಲಿ ತನಿಖೆ ಮುಂದುವರಿದಂತೆಲ್ಲ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ.

RELATED ARTICLES

Related Articles

TRENDING ARTICLES