ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್ ಸೇರಿ 13 ಮಂದಿ ತಂಡಕ್ಕೆ ಬಿರಿಯಾನಿ ನೀಡಿದ್ದಕ್ಕೆ ಪೊಲೀಸರ ವಿರುದ್ಧ ಹಿರಿಯ ಅಧಿಕಾರಿಗಳು ಗರಂ ಆಗಿದ್ದಾರೆ. ಈ ಹಿನ್ನೆಲೆ ಪೊಲೀಸರು ರಾತ್ರಿ ಆರೋಪಿಗಳಿಗೆ ಅನ್ನ ಸಾರು ನೀಡಿದ್ದಾರೆ.
ದರ್ಶನ್ ಅವರು ಜೂನ್ 11ರಂದು ಕೊಲೆ ಆರೋಪದಲ್ಲಿ ಬಂಧಿಸಲಾಗಿತ್ತು. ಅಂದು ರಾತ್ರಿ ದರ್ಶನ್ ಹಾಗೂ ಅವರ ಗ್ಯಾಂಗ್ಗೆ ಬಿರಿಯಾನಿ ನೀಡಲಾಗಿತ್ತು. ಇದಕ್ಕೆ ಪೂರಕವಾಗಿ ಜೈಲಿನ ಹೊರ ಭಾಗದಲ್ಲಿ ಬಿರಿಯಾನಿ ಬಾಕ್ಸ್ ಕಾಣಿಸಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.
ಈ ಫೋಟೊಗಳು ವೈರಲ್ ಆಗುತ್ತಿದ್ದಂತೆ ಪೊಲೀಸರು ಸಂಕಷ್ಟ ಸಿಲುಕಿದ್ದಾರೆ. ಅಧಿಕಾರಿಗಳ ಎಚ್ಚರಿಕೆಯಿಂದ ಈ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಇದನ್ನೂ ಓದಿ: ನಟ ದರ್ಶನ್, ಪವಿತ್ರಾ ಗೌಡರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ದರ್ಶನ್ ಕಿವಿಗೆ ಅಶ್ಲೀಲ ಮೆಸೇಜ್ ವಿಚಾರ ಬೀಳಬಾರದಿತ್ತು:
ಚಿತ್ರದುರ್ಗದ ರೇಣುಕಸ್ವಾಮಿ ಮರ್ಡರ್ ಕೇಸ್ನಲ್ಲಿ ಕಿಲ್ಲರ್ ಸ್ಟಾರ್ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾ ಗೌಡ ಹಾಗೂ ಇತರರು ಅರೆಸ್ಟ್ ಆಗಿ ಇಂದಿಗೆ ಮೂರನೇ ದಿನವಾಗಿದೆ. ಈ ಮಧ್ಯೆ ಪವಿತ್ರಾ ಗೌಡ ಅವರು ಜೈಲಿನಲ್ಲೇ ಕಣ್ಣೀರು ಹಾಸಿದ್ದು ಘಟನೆ ಬಗ್ಗೆ ಪಶ್ಚಾತಾಪ ಪಡುತ್ತಿದ್ದಾರೆ.
ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದ ವಿಚಾರ ದರ್ಶನ್ ಕಿವಿಗೆ ಬೀಳಬಾರದಿತ್ತು. ನಾನೇ ದೂರು ನೀಡಿ ಸರಿಪಡಿಸಿಕೊಳ್ಳಬೇಕಿತ್ತು. ದರ್ಶನ್ಗೆ ವಿಚಾರ ಗೊತ್ತಾಗಿ ಇಷ್ಟೆಲ್ಲ ಅನಾಹುತ ನಡೆದುಹೋಯ್ತು ಎಂದು ಪವಿತ್ರಾ ಗೌಡ ಕೊರಗುತ್ತಿದ್ದಾರೆ. ಈ ವಿಚಾರ ನನ್ನಲ್ಲೇ ಇದ್ದಿದ್ದರೆ ಈಗ ಆರಾಮಾಗಿರಬಹುದಿತ್ತು. ಕೊಲೆ ಹಂತಕ್ಕೆ ಯಾರು ಹೋಗುತ್ತಾ ಇರಲಿಲ್ಲ. ಆರೋಪಿಗಳಾಗಿ ನಾವು ಜೈಲು ಸೇರುತ್ತಿರಲಿಲ್ಲ ಎಂದು ಪವಿತ್ರಾ ಗೌಡ ಪಶ್ಚಾತಾಪ ಪಡುತ್ತಿದ್ದಾರೆ.