Wednesday, June 26, 2024

ನಟ ದರ್ಶನ್​ ಮ್ಯಾನೇಜರ್​ ಶ್ರೀಧರ್‌ ಡೆತ್‌ ನೋಟ್ ಸುತ್ತ.. ಅನುಮಾನದ ಹುತ್ತ

ಬೆಂಗಳೂರು: ನಟ ದರ್ಶನ್​ ಅವರ ಆನೇಕಲ್​ ಫಾರಂ ಹೌಸ್​ನಲ್ಲಿ ದರ್ಶನ್​ ಮ್ಯಾನೇಜರ್​ ಶ್ರೀಧರ್​ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಸಾವಿಗೂ ಮುನ್ನ ಮ್ಯಾನೇಜರ್​ ಶ್ರೀಧರ್​ ಡೆತ್​ ನೋಟ್​ ಬರೆದಿಟ್ಟು ಸಾವನ್ನಪ್ಪಿದ್ದಾನೆ ಈ ಡೆತ್​ ನೋಟ್​ ಸುತ್ತ ಅನುಮಾನಗಳ ಹುತ್ತ ಸೃಷ್ಟಿಯಾಗುತ್ತಿದ್ದು, ಇದರೊಂದು ನಟ ದರ್ಶನ್​ ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಏಪ್ರಿಲ್ 17 ರಂದು ಶ್ರೀಧರ್​ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ʼ ಇದ್ದು, ಅಲ್ಲಿ ಈತ ಮ್ಯಾನೇಜರ್‌ ಆಗಿದ್ದ.

ಆತ್ಮಹತ್ಯೆಗೂ ಮುನ್ನ ಶ್ರೀಧರ್​ ಡೆತ್​ ನೋಟ್​ ಬರೆದಿಟ್ಟಿದ್ದ. ಇದರಲ್ಲಿ, ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ತಿರೋದಾಗಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

ಇದನ್ನೂ ಓದಿ: ದರ್ಶನ್​ ಫಾರಂ ಹೌಸ್​ನಲ್ಲಿ ಮ್ಯಾನೇಜರ್​ ಅಸಹಜ ಸಾವು: ಮತ್ತೊಂದು ನಿಗೂಢ

ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ. “ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ.

“ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ.

RELATED ARTICLES

Related Articles

TRENDING ARTICLES