Saturday, September 28, 2024

ದರ್ಶನ್​ ಆಪ್ತಗೆಳತಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ಹಲ್ಲೆ ಹಾಗು ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಆರೋಗ್ಯದಲ್ಲಿ ಏರುಪೇರಾಗಿದ್ದು ತೀವ್ರ ಅಸ್ವಸ್ಥರಾಗಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಕಳೆದ ಒಂದು ವಾರದಿಂದ ಪೊಲೀಸ್‌ ವಶದಲ್ಲಿ ಇದ್ದರು. ನಿತ್ಯ ಬೆಳಿಗ್ಗೆ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ಬಳಿಕ ನಿಮ್ಹಾನ್ಸ್‌ನ ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗುತ್ತಿತ್ತು.

ಇದನ್ನೂ ಓದಿ: ಕಿಲ್ಲಿಂಗ್​ ಸ್ಟಾರ್​ ದರ್ಶನ್​ ಮನೆ ಉಡೀಸ್​?

ಭಾನುವಾರ ಆರ್‌ಆರ್‌ ನಗರ ಮನೆಯಲ್ಲಿ ದಿನವಿಡೀ ಪೊಲೀಸರು ಮಹಜರು ನಡೆಸಿದ್ದು, ಆ ಬಳಿಕ ಪವಿತ್ರಾ ಅವರು ಸುಸ್ತಾಗಿದ್ದರು. ಮಂಗಳವಾರ ಬೆಳಿಗ್ಗೆ ತೀವ್ರ ಆಯಾಸ ಎಂದ ಪವಿತ್ರ ಗೌಡ ಅವರನ್ನು ಪೊಲೀಸರು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES