ಹಾಸನ: ಹಾಸನದಲ್ಲಿ ಹಾಡಹಗಲೇ ಶೂಟೌಟ್ ನಡೆದಿದ್ದು ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ನಡೆದಿದೆ.
ಹಾಸನದ ಹೊಯ್ಸಳ ನಗರದ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ಮುಸ್ಲಿಂ ಸಮುದಾಯದ ಇಬ್ಬರು ಯುವರು ಸಾವಿಗೀಡಾಗಿದ್ದಾರೆ. ಮೃತರನ್ನು ಹಾಸನದ ಶರಫತ್ ಅಲಿ, ಬೆಂಗಳೂರಿನ ಆಶಿಫ್ ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಜೊತೆಗಿದ್ದವನನ್ನು ಗುಂಡಿಟ್ಟು ಕೊಂದು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಇಬ್ಬರು ಮೃತರೂ ರಿಯಲ್ ಎಸ್ಟೇಟ್ ಉದ್ಯಮಿಗಳು ಎನ್ನಲಾಗುತ್ತಿದೆ. ಘಟನೆಗೆ ಆಸ್ತಿ ವಿಚಾರವೇ ಕಾರಣ ಎಂದು ಅನುಮಾನ ವ್ಯಕ್ತವಾಗಿದ್ದು ಅಸಲಿ ಕಾರಣ ತನಿಖೆಯಿಂದಷ್ಟೆ ತಿಳಿಯಬೇಕಾಗಿದೆ.
ಇದನ್ನೂ ಓದಿ: ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಜುಲೈ 1ರಿಂದ ದುಬಾರಿ ಮದ್ಯ ಅಗ್ಗ
ಈ ಕುರಿತು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಮಾದ್ಯಮ ಪ್ರತಿಕ್ರಿಯೆ ನೀಡಿ, ಗುಂಡಿನ ದಾಳಿಯ ಬಗ್ಗೆ ಖಚಿತಪಡಿಸಿದ್ದಾರೆ. ಘಟನೆ ಸಂಬಂಧ ಸಾರ್ವಜನಿಕರು ಕರೆ ಮಾಡಿ ನಮಗೆ ಮಾಹಿತಿ ನೀಡಿದ್ದಾರೆ, ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದೇವೆ, ಪರಿಶೀಲನೆ ವೇಳೆ ಕಾರಿನಲ್ಲಿ ಒಂದು ವೆಪನ್ ಲಭ್ಯವಾಗಿದೆ. ಮೃತರ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ, ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಘಟನಾ ಸ್ಥಳದ ಬೆರಳಚ್ಚು ತಜ್ಞರು ಹಾಗು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿದ್ದೂ
ಪರಿಶೀಲನೆ ನಡೆಸುತ್ತಿದ್ದಾರೆ.