Monday, July 1, 2024

ಹಾಸನದಲ್ಲಿ ಹಾಡಹಗಲೇ ಶೂಟೌಟ್​: ಇಬ್ಬರು ಸಾವು

ಹಾಸನ: ಹಾಸನದಲ್ಲಿ ಹಾಡಹಗಲೇ ಶೂಟೌಟ್​ ನಡೆದಿದ್ದು ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ನಡೆದಿದೆ.

ಹಾಸನದ ಹೊಯ್ಸಳ ನಗರದ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ಮುಸ್ಲಿಂ ಸಮುದಾಯದ ಇಬ್ಬರು ಯುವರು ಸಾವಿಗೀಡಾಗಿದ್ದಾರೆ. ಮೃತರನ್ನು ಹಾಸನದ ಶರಫತ್ ಅಲಿ, ಬೆಂಗಳೂರಿನ ಆಶಿಫ್ ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ ಜೊತೆಗಿದ್ದವನನ್ನು ಗುಂಡಿಟ್ಟು ಕೊಂದು ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಇಬ್ಬರು ಮೃತರೂ ರಿಯಲ್​ ಎಸ್ಟೇಟ್​ ಉದ್ಯಮಿಗಳು ಎನ್ನಲಾಗುತ್ತಿದೆ. ಘಟನೆಗೆ ಆಸ್ತಿ ವಿಚಾರವೇ ಕಾರಣ ಎಂದು ಅನುಮಾನ ವ್ಯಕ್ತವಾಗಿದ್ದು ಅಸಲಿ ಕಾರಣ ತನಿಖೆಯಿಂದಷ್ಟೆ ತಿಳಿಯಬೇಕಾಗಿದೆ.

ಇದನ್ನೂ ಓದಿ: ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಜುಲೈ 1ರಿಂದ ದುಬಾರಿ ಮದ್ಯ ಅಗ್ಗ

ಈ ಕುರಿತು ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೊಹಮ್ಮದ್​ ಸುಜೀತಾ ಅವರು ಮಾದ್ಯಮ ಪ್ರತಿಕ್ರಿಯೆ ನೀಡಿ, ಗುಂಡಿನ ದಾಳಿಯ ಬಗ್ಗೆ ಖಚಿತಪಡಿಸಿದ್ದಾರೆ. ಘಟನೆ ಸಂಬಂಧ ಸಾರ್ವಜನಿಕರು ಕರೆ ಮಾಡಿ ನಮಗೆ ಮಾಹಿತಿ ನೀಡಿದ್ದಾರೆ, ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದೇವೆ, ಪರಿಶೀಲನೆ ವೇಳೆ ಕಾರಿನಲ್ಲಿ ಒಂದು ವೆಪನ್​  ಲಭ್ಯವಾಗಿದೆ. ಮೃತರ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ, ತಲೆಗೆ ಶೂಟ್​ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಘಟನಾ ಸ್ಥಳದ  ಬೆರಳಚ್ಚು ತಜ್ಞರು ಹಾಗು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿದ್ದೂ
ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

Related Articles

TRENDING ARTICLES