ಬೆಂಗಳೂರು: ರೇಣುಕಾಸ್ವಾಮಿ ಕಿಡ್ನಾಪ್ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರ ಕಸ್ಟಡಿಯಲ್ಲಿರುವ ನಟ ದರ್ಶನ್ ಕುರಿತು ಮದ್ದೂರು ಶಾಸಕ ಕದಲೂರು ಉದಯ್ ಗೌಡ ಪ್ರತಿಕ್ರಿಯೆ ನೀಡಿದ್ದೂ ನಟನ ಪರ ಬ್ಯಾಟ್ ಬೀಸಿದ್ದಾರೆ.
ದರ್ಶನ್ ಅವರನ್ನು ಯಾರೂ ರಕ್ಷಣೆ ಮಾಡುತ್ತಿಲ್ಲ. ಕಾನೂನು ಎಲ್ಲರಿಗೂ ಒಂದೇಯಾಗಿದ್ದು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದರೆ ಕಾನೂನು ಪ್ರಕಾರವೇ ಶಿಕ್ಷೆ ಆಗುತ್ತದೆ ಎಂದರು.
ರೇಣುಕಾಸ್ವಾಮಿ ಕೊಲೆ ಖಂಡನೀಯ. ಅದರಲ್ಲಿ ಎರಡು ಮಾತಿಲ್ಲ. ಯಾರೇ ಕೊಲೆ ಮಾಡಿದರೂ ತಪ್ಪು. ಇದರಲ್ಲಿ ದರ್ಶನ್ ಪಾತ್ರ ಏನು? ಜೊತೆಯಲ್ಲಿ ಇರವವರು ಮಾಡಿದ್ದರಿಂದ ಸುತ್ತಿಕೊಂಡಿದೆಯಾ? ತನಿಖೆಯಿಂದ ಹೊರಗೆ ಬರಬೇಕು. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.