Saturday, September 28, 2024

ದರ್ಶನ್​ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿ, ಸ್ವಲ್ಪ ಸಿಡುಕು: ಶಾಸಕ ಕದಲೂರು ಉದಯ್​

ಬೆಂಗಳೂರು: ರೇಣುಕಾಸ್ವಾಮಿ ಕಿಡ್ನಾಪ್​ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರ ಕಸ್ಟಡಿಯಲ್ಲಿರುವ ನಟ ದರ್ಶನ್​ ಕುರಿತು ಮದ್ದೂರು ಶಾಸಕ ಕದಲೂರು ಉದಯ್ ಗೌಡ ಪ್ರತಿಕ್ರಿಯೆ ನೀಡಿದ್ದೂ ನಟನ ಪರ ಬ್ಯಾಟ್‌ ಬೀಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ದರ್ಶನ್‌ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ ಮಾಡುವಂತಹ ಬುದ್ಧಿ ದರ್ಶನ್‌ಗೆ ಇಲ್ಲ ಎಂದು ಉದಯ್‌  ಗೌಡ ಸರ್ಟಿಫಿಕೇಟ್‌ ನೀಡಿದ್ದಾರೆ.
ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್‌ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ, ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು.

 

ದರ್ಶನ್ ಅವರನ್ನು ಯಾರೂ ರಕ್ಷಣೆ ಮಾಡುತ್ತಿಲ್ಲ. ಕಾನೂನು ಎಲ್ಲರಿಗೂ ಒಂದೇಯಾಗಿದ್ದು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದರೆ ಕಾನೂನು ಪ್ರಕಾರವೇ ಶಿಕ್ಷೆ ಆಗುತ್ತದೆ ಎಂದರು.

ರೇಣುಕಾಸ್ವಾಮಿ ಕೊಲೆ ಖಂಡನೀಯ. ಅದರಲ್ಲಿ ಎರಡು ಮಾತಿಲ್ಲ. ಯಾರೇ ಕೊಲೆ ಮಾಡಿದರೂ ತಪ್ಪು. ಇದರಲ್ಲಿ ದರ್ಶನ್ ಪಾತ್ರ ಏನು? ಜೊತೆಯಲ್ಲಿ ಇರವವರು ಮಾಡಿದ್ದರಿಂದ ಸುತ್ತಿಕೊಂಡಿದೆಯಾ? ತನಿಖೆಯಿಂದ ಹೊರಗೆ ಬರಬೇಕು. ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES