ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣದ ತನಿಖೆಯ ಹೊಣೆಯನ್ನೂ ಎಡಿಜಿಪಿ ಬಿ.ಕೆ. ಸಿಂಗ್ ಹೆಗಲಿಗೆ ನೀಡಲಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡಕ್ಕೆ ಸೂರಜ್ ರೇವಣ್ಣ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನೀಡಿದೆ.
ಇದನ್ನೂ ಓದಿ: ಮಾಜಿ ಪ್ರಧಾನಿ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ!
ಸೂರಜ್ ರೇವಣ್ಣ ಬಂಧನದ ಬಳಿಕ ಬೆಂಗಳೂರಿಗೆ ಕರೆತಂದಿರುವ ಪೊಲೀಸರು ಮೊದಲಿಗೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಿ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆಯಲ್ಲಿದ್ದೂ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ಪೊಲೀಸರು ಮನವಿ ಮಾಡಲಿದ್ದಾರೆ.