ಮೈಸೂರು: ತಮ್ಮ ಮನೆಯ ಬಳಿ ಬಂದು ಮಂಗಳಮುಖಿಯರು ಗಲಾಟೆ ಮಾಡಿದರು ಎಂಬ ಕಾರಣಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ರಾಹುಲ್ ಮೌರ್ಯ (17) ಮೃತದುರ್ದೈವಿ. ಮೃತ ರಾಹುಲ್, ಮಂಗಳಮುಖಿ ಜೊತೆ ಸ್ನೇಹ ಬೆಳೆಸಿದ್ದ. ಆದ್ರೆ, ಅದೇನಾಯ್ತೋ ಏನೋ ಮಂಗಳಮುಖಿಯರು, ರಾಹುಲ್ ಮನೆಗೆ ಬಂದು ಆತನ ಕುಟುಂಬಸ್ಥರ ಜೊತೆ ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದು ರಾಹುಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಜೈಲಿನಲ್ಲಿ ಪತ್ನಿ ಮಗನನ್ನು ಕಂಡು ಬಿಕ್ಕಿ ಬಿಕ್ಕಿ ಅತ್ತ ನಟ ದರ್ಶನ್
ರಾಹುಲ್, ನಾಲ್ಕು ತಿಂಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ. ಬಳಿಕ ಜೂನ್ 21 ರಂದು ದೊಡ್ಡಮ್ಮನ ಮನೆಗೆ ವಾಪಾಸ್ಸಾಗಿದ್ದ. ಆದರೆ, ಜೂನ್ 23 ಭಾನುವಾರ ಕೆಲವು ಮಂಗಳಮುಖಿಯರು ರಾಹುಲ್ ಮೌರ್ಯ ಕುಟುಂಬಸ್ಥರ ಜೊತೆ ಗಲಾಟೆ ಮಾಡಿದ್ದಾರೆ. ನೀವು ನಿಮ್ಮ ಹುಡುಗನನ್ನು ನಮ್ಮೊಂದಿಗೆ ಕಳಿಸಿಕೊಡಿ ಎಂದು ಗಲಾಟೆ ಮಾಡಿದ್ದರು. ಜೊತೆಗೆ, ನಿಮ್ಮ ಮಗನೇ ನಮ್ಮ ಹುಡುಗಿಯನ್ನು ಕರೆದೊಯ್ದಿದ್ದಾನೆಂದು ಆರೋಪಿಸಿ ಮಂಗಳಮುಖಿಯರು ಊರಿನಲ್ಲಿ ಬಂದು ಜೋರಾಗಿ ಗಲಾಟೆಯನ್ನೂ ಮಾಡಿದ್ದರು.
ಇದರಿಂದ ಮನನೊಂದ ರಾಹುಲ್ ಅದೇ ದಿನ ಸಂಜೆಯೇ ಜಮೀನಿನಲ್ಲಿರುವ ಶೆಡ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.