Saturday, September 28, 2024

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ: CIDಗೆ ನೀಡುವಂತೆ ಸಿಎಂ ಸೂಚನೆ

ಬೆಂಗಳೂರು: ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸಾವಿನ ಪ್ರಕರಣದ ತನಿಖೆಯನ್ನು CID ಗೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮೇ 15 ರಂದು ಬೆಂಗಳೂರು ದಕ್ಷಿಣ DCP ವ್ಯಾಪ್ತಿಯ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರಭುದ್ದ ಸಾವಿನ ಪ್ರಕರಣವನ್ನು CID ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಪತ್ನಿ ಮಗನನ್ನು ಕಂಡು ಬಿಕ್ಕಿ ಬಿಕ್ಕಿ ಅತ್ತ ನಟ ದರ್ಶನ್​

ಸಾಮಾಜಿಕ ಕಾರ್ಯಕರ್ತೆ ಆಗಿರುವ ಕೆ.ಆರ್.ಸೌಮ್ಯ ಅವರು ತಮ್ಮ ಪುತ್ರಿ ಸಾವಿನ ಪ್ರಕರಣದ ತನಿಖೆಗೆ ಒಪ್ಪಿಸಲು ಸಾಮಾಜಿಕ ಕಾರ್ಯಕರ್ತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದರು.
ಮುಖ್ಯಮಂತ್ರಿಗಳು ಮನವಿ ಪುರಸ್ಕರಿಸಿ ಪ್ರಕರಣದ ತನಿಖೆಯನ್ನು CID ಗೆ ವರ್ಗಾಯಿಸಲು ಸೂಚಿಸಿದ್ದಾರೆ.

RELATED ARTICLES

Related Articles

TRENDING ARTICLES