Sunday, September 29, 2024

ಉಮಾಪತಿ ಹಾಗು ಪ್ರಥಮ್​ಗೆ ಬೆದರಿಕೆ ಹಾಕಿದ್ದ ದರ್ಶನ್​ ಅಂದಾಭಿಮಾನಿ ಅರೆಸ್ಟ್​: ಕ್ಷಮೆ ಕೋರಿದ ವೀಡಿಯೋ ವೈರಲ್​

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್​ ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್​ ಮತ್ತು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ ಬೆನ್ನಲ್ಲೇ ದರ್ಶನ್​ನ ಕೆಲ ಅಭಿಮಾನಿಗಳು ಅತಿರೇಕದಿಂದ ವರ್ತಿಸುತ್ತಿದ್ದಾರೆ.

ದರ್ಶನ್ ಅರೆಸ್ಟ್ ಸುದ್ದಿ ಪ್ರಸಾರ ಮಾಡಿದ್ದ ಮಾಧ್ಯಮಗಳ ಮೇಲೆ ಬೆದರಿಕೆ ಹಾಕಲಾಗಿತ್ತು. ಅಲ್ಲದೇ ದರ್ಶನ್ ವಿರುದ್ಧ ಮಾತನಾಡಿದ್ದ ಉಮಾಪತಿ ಗೌಡ ಹಾಗೂ ಪ್ರಥಮ್ ಗೆ ಅಂದಾಭಿಮಾನಿಗಳು ಬೆದರಿಕೆ ಹಾಕಿದ್ದರು. ಬೆದರಿಕೆ ಕರೆಗಳು ಬಂದ ಹಿನ್ನೆಲೆ ನಟ ಪ್ರಥಮ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಅಶ್ಲೀಲ ಕಮೆಂಟ್, ಬೆದರಿಕೆ ಹಾಕ್ತಿರೋರಿಗೆ ಕಾದಿದೆ ಸಂಕಷ್ಟ ಎಂಬುದಾಗಿದೆ.
ನಟ ದರ್ಶನ್​ ಅಂಡ್​ ಗ್ಯಾಂಗ್​ನ್ನು ಅನ್ನಪೂರ್ಣೇಶ್ವರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸುವ ವೇಳೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಚೇತನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತ್ತೂರಿನಿಂದ ದರ್ಶನ್ ಅಂದಾಭಿಮಾನಿ ಚೇತನ್ ನನ್ನು ಪೊಲೀಸರು ಎಳೆದು ತಂದಿದ್ದಾರೆ. ಜೊತೆಗೆ ಮತ್ತೊಬ್ಬ ಅಭಿಮಾನಿ ನಾಗೇಶ್ ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಬೆದರಿಕೆ ಹಾಕಿದ ಅಭಿಮಾನಿಗಳ ಮೇಲೆ PCR ದಾಖಲು ಮಾಡಲಾಗಿದೆ. ಬಸವೇಶ್ವರ ನಗರ ಠಾಣೆಯಲ್ಲಿ ಕೋರ್ಟ್ ಸೂಚನೆಯಂತೆ ಎಫ್‍ಐಆರ್ ದಾಖಲು ಮಾಡಲಾಗಿದೆ.
ಅರೆಸ್ಟ್ ಆಗ್ತಿದ್ದಂತೆ ಉಮಾಪತಿ ಗೌಡ ಹಾಗೂ ಪ್ರಥಮ್ ಗೆ ಚೇತನ್ ಕ್ಷಮೆ ಕೇಳಿದ್ದಾನೆ. ಕಾನೂನು ಬದ್ಧವಾಗಿ ನಡೆದುಕೊಳ್ತೀನಿ ಕ್ಷಮಿಸಿ ಅಂತಾ ವೀಡಿಯೋ ಮಾಡಿದ್ದು, ಇದೀಗ ಈ ವೀಡಿಯೋ ವೈರಲ್ ಆಗುತ್ತಿದೆ.

RELATED ARTICLES

Related Articles

TRENDING ARTICLES