Sunday, September 29, 2024

ಡೆತ್‌ ನೋಟ್‌ ಬರೆದಿಟ್ಟು ಯುವಕ ಸೂಸೈಡ್!

ಮೈಸೂರು: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದಲ್ಲಿ ನಡೆದಿದೆ.

ಕಿರಣ್ ಎಂಬಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿ.ನರಸೀಪುರದ ಸಾಯಿ ಗಾರ್ಮೆಂಟ್ಸ್​​​ನಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ನನ್ನ ಕೆಲಸದಿಂದ ತೆಗೆದುಹಾಕಿದ್ದಾರೆ. ಹೀಗಾಗಿ ʻನನ್ನ ಸಾವಿಗೆ ಕಂಪನಿಯ ಕ್ವಾಲಿಟಿ AGM ಲೋಕೇಶ್ ಹಾಗೂ HR, AGM ಅನಿಲ್ ಕಾರಣ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಇವರಿಂದ ಕೆಲಸ ಸಿಗದೆ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆʼ ಎಂದು ಡೆತ್‌ ನೋಟ್‌ ಬರೆದಿಟ್ಟು ಸೂಸೈಡ್‌ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಈ ಸಂಬಂಧ ತಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES