ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್ವುಡ್ನ ಮತ್ತೊಬ್ಬ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಅಭಿಮಾನಿಗಳು ನಿಂತಿದ್ದಾರೆ.
ಧ್ರುವ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡ ಇಂದು ರೇಣುಕಾಸ್ವಾಮಿ ಕುಟುಂಬಸ್ಥರ ಭೇಟಿಮಾಡಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಆ್ಯಕ್ಷನ್ ಪ್ರಿನ್ಸ್ ಕೂಡ ದೂರವಾಣಿ ಮೂಲಕ ಮಾತನಾಡಿ ರೇಣುಕಾಸ್ವಾಮಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ನಿಮ್ಮೊಂದಿಗೆ ಸದಾ ನಾವು ಇದ್ದೇವೆ.. ಏನೇ ಇದ್ದರೂ ತಿಳಿಸಿ ಎಂದ ಧ್ರುವ ಸರ್ಜಾ ಧೈರ್ಯ ತುಂಬಿದ್ದಾರೆ.
ಇದನ್ನೂ ಓದಿ: ದರ್ಶನ್ ಬಳಿ ಇರುವ 2 US ಮೇಡ್ ಗನ್ ವಶಕ್ಕೆ ಪಡೆಯುವಂತೆ ಸೂಚನೆ!
ಮಗನ ಸಾವಿನ ನೋವಿನಲ್ಲಿ ದಿನಗಳನ್ನ ದೂಡುತ್ತಿರೋ ರೇಣುಕಾಸ್ವಾಮಿ ಕುಟುಂಬಕ್ಕೆ ಇದೇ ದೃವಾ ಸರ್ಜಾ ಅಭಿಮಾನಿಗಳು ಧನಸಹಾಯ ಮಾಡಿದ್ದಾರೆ.
ಇನ್ನು, ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರದ ಜೈಲಿನಲ್ಲಿ ನ್ಯಾಯಂಗ ಬಂಧನದಲ್ಲಿದ್ದಾರೆ.