Saturday, June 29, 2024

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಬೆಂಗಳೂರು: ಅಶ್ಲೀಲ ವೀಡಿಯೋಗಳ ಪೆನ್​ಡ್ರೈವ್​ ಪ್ರಕರಣದ ರೂವಾರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು ಈ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು  ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿಸಿತ್ತು. ಆದ್ರೆ, ಇಂದು ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್​ ರೇವಣ್ಣಗೆ ನಿರಾಸೆಯಾಗಿದೆ.

ಇದನ್ನೂ ಓದಿ: ಮೃತ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತ ನಟ ಧೃವಾ ಸರ್ಜಾ ಅಭಿಮಾನಿಗಳು

ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಪರಪ್ಪನ ಅಗ್ರಹಾರ ಜೈಲಿನದ್ದ ಪ್ರಜ್ವಲ್​ನನ್ನು ಮೂರನೇ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೇ ಇಂದು (ಬುಧವಾರ)  ಪ್ರಜ್ವಲ್​ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು H.D.ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ಮಾಡಿದರು. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿರುವ ರೇವಣ್ಣರ ಚೆನ್ನಾಂಬಿಕಾ ‌ನಿವಾಸದಲ್ಲಿ ಸ್ಥಳ ಮಹಜರು ಮುಗಿಸಿದ ಎಸ್​ಐಟಿ ಅಧಿಕಾರಿಗಳು, ಪ್ರಜ್ವಲ್​ನನ್ನು ಕರೆದುಕೊಂಡು ಬೆಂಗಳೂರಿನತ್ತ ಹೊರಟಿದ್ದಾರೆ.

RELATED ARTICLES

Related Articles

TRENDING ARTICLES