ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ತಮ್ಮ ಅಭಿಮಾನಿಗಳಿಗೆ ಪೊಲೀಸ್ ಅಧಿಕಾರಿಗಳ ಮೂಲಕ ಒಂದು ಮನವಿ ಮಾಡಿಕೊಂಡಿಂದಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿ ಜೈಲು ಪಾಲಾಗಿರುವ ನಟ ದರ್ಶನ್ ಭೇಟಿಗೆ ನಿತ್ಯ ಸೆಲೆಬ್ರಿಟಿಗಳಿಂದ ಹಿಡಿದು ಅಭಿಮಾನಿಗಳು ಸಾಲು ಸಾಲಾಗಿ ಬರುತ್ತಿದ್ದಾರೆ. ಅದರಲ್ಲೂ ವಿಕಲಚೇತನ ಅಭಿಮಾನಿಗಳು ಬಂದು ದರ್ಶನ್ ಭೇಟಿಗಾಗಿ ಕಾಯುತ್ತಿರುವ ವಿಚಾರ ತಿಳಿದು ಜೈಲಿನಿಂದಲೇ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ಅಂಡ್ ಗ್ಯಾಂಗ್ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ಹೆಸರಲ್ಲಿ ವಿಕೀಪೀಡಿಯಾ ಪೇಜ್ ಸೃಷ್ಟಿ
ಅಭಿಮಾನಿಗಳು ಯಾರು ಜೈಲಿನ ಬಳಿ ಬರಬೇಡಿ, ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳನ್ನು ಭೇಟಿ ಮಾಡುವುದು ಅಸಾಧ್ಯ, ಜೈಲಿನ ಬಳಿ ನನ್ನ ಭೇಟಿಗಾಗಿ ನೀವು ಕಾಯುವುದು ಬಳಿಕ ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಾಸ್ ಹೋಗುವುದು ಅದರಲ್ಲೂ, ಗುರುವಾರ ವಿಶೇಷ ಚೇತನ ಯುವತಿ ಸೌಮ್ಯ ಭೇಟಿಗೆ ಆಗಮಿಸಿದ್ದರು ಜೊತೆಗೆ ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಎಂಬ ವಿಶೇಷ ಚೇತನ ಕೂಡ ಆಗಮಿಸಿ ಭೇಟಿಗೆ ಅವಕಾಶ ಸಿಗದೇ ವಾಪಾಸ್ಸಾಗಿರುವುದು ಬೇಸರ ತಂದಿದೆ. ಈ ಎಲ್ಲಾ ವಿಚಾರಗಳು ತಿಳಿದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿಕೊಂಡಿದ್ದಾರೆ.
ಜೈಲಿನಲ್ಲಿ ಏಳುದಿನ ಕಳೆದ ನಟ ದರ್ಶನ್:
ಇನ್ನು ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿ ಇಂದಿಗೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಜೈಲಿನ ನಿಯಮದ ಪ್ರಕಾರ ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ಸವಿಸಿ ತಡವಾಗಿ ನಿದ್ರೆಗೆ ಜಾರಿದ್ದಾರೆ. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರಗೊಂಡು ಎಂದಿನಂತೆ ಬಿಸಿನೀರು ಸೇವಿಸಿದ ದರ್ಶನ್
ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್ ಮಾಡಿದ್ದಾರೆ.